ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಮಟ್ಟದ ಅಲ್ಪಸಂಖ್ಯಾತ ಮುಖಂಡರ ಸಭೆ

0

ಪಕ್ಷದ ಬಲವರ್ಧನೆಗೆ ಹೆಚ್ಚಿನ ಒತ್ತು ಕೊಡಬೇಕು-ಮೀರಾ ಸಾಹೇಬ್ ಕಡಬ

ಪುತ್ತೂರು: ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಮಟ್ಟದ ಅಲ್ಪಸಂಖ್ಯಾತ ಮುಖಂಡರ ಸಭೆಯು ಪಕ್ಷದ ಬೆಂಗಳೂರಿನಲ್ಲಿರುವ ಕಚೇರಿ ಜೆಪಿ ಭವನದಲ್ಲಿ ಜು.18ರಂದು ನಡೆಯಿತು.

ಸಭೆಯಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿಗಳು ,ಕಡಬ ತಾಲೂಕು ಅಧ್ಯಕ್ಷ ಹಾಜಿ ಸಯ್ಯದ್ ಮೀರಾ ಸಾಹೇಬ್ ಮಾತನಾಡಿ ಪಕ್ಷ ಸಂಘಟನೆಗೆ ನಾವೆಲ್ಲಾ ಹೆಚ್ಚಿನ ಒತ್ತು ಕೊಡಬೇಕು, ಪಕ್ಷದ ಕಾರ್ಯಕರ್ತರಿಗೆ ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಆತ್ಮವಿಶ್ವಾಸವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳುವ ಮೂಲಕ ನಾವೆಲ್ಲಾ ಪಕ್ಷದ ಬಲವರ್ಧನೆಗಾಗಿ ಪ್ರಯತ್ನಿಸಬೇಕು ಎಂದು ಹೇಳಿದರು.ಮುಂಬರುವ, ತಾ.ಪಂ, ಜಿ.ಪಂ ಮತ್ತು ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಪಕ್ಷ ನಿರ್ಣಾಯಕ ಪಾತ್ರವನ್ನು ವಹಿಸುವುದಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು ಪಕ್ಷದ ಜಿಲ್ಲಾ ಮುಖಂಡರುಗಳ ಸಭೆ ಕರೆದು ಮಾರ್ಗದರ್ಶನ ನೀಡುವುದರೊಂದಿಗೆ ಪಕ್ಷದ ಜಾತ್ಯಾತೀತ ನಿಲುವು, ಸಾಮಾಜಿಕ ನ್ಯಾಯವನ್ನು ಬಲಪಡಿಸಬೇಕೆಂದು ಹೇಳಿದರು. ಸಭೆಯಲ್ಲಿ ಪಕ್ಷದ ರಾಜ್ಯ ಮಟ್ಟದ ಪದಾಧಿಕಾರಿಗಳು ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಲ್ಪಸಂಖ್ಯಾತರ ಮುಖಂಡರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here