ಪುತ್ತೂರು: ಪ್ರದೀಪ್ ಕುಮಾರ್ ರೈ ಅವರಿಂದ ಹಲ್ಲೆ ಆರೋಪ – ಗಾಯಾಳು ಅಭಿಷೇಕ್ ಆರೋಗ್ಯ ವಿಚಾರಿಸಿದ ಮಾಜಿ ಶಾಸಕ ಸಂಜೀವ ಮಠಂದೂರು

0

ಪುತ್ತೂರು: ಮೂಲತಃ‌ ಕಲ್ಲಡ್ಕದವರಾಗಿದ್ದು ಪುತ್ತೂರು ಮುಕ್ವೆಯಲ್ಲಿ ವಾಸ್ತವ್ಯ ಹೊಂದಿರುವ ಅಭಿಷೇಕ್ ಎಂಬವರಿಗೆ ಕಾಂಗ್ರೆಸ್ ಮುಖಂಡ ಪ್ರದೀಪ್ ಕುಮಾರ್ ರೈ ಪಾಂಬಾರು ಅವರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳು ಅಭಿಷೇಕ್ ಅವರನ್ನು ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.


ನಗರದಿಂದ ಮುರಕ್ಕೆ ಸಂಚರಿಸುವ ಮಾರ್ಗ ಮಧ್ಯೆ ಇರುವ, ಪುತ್ತೂರು ಟಿಂಬರ್ ಶಾಪ್ ಹತ್ತಿರ ಅಭಿಷೇಕ್ ನಿಂತಿದ್ದ ಸಂದರ್ಭದಲ್ಲಿ, ಪ್ರದೀಪ್ ರೈ ಅವರು ಅತೀ ವೇಗವಾಗಿ ಕಾರು ಚಲಾಯಿಸುತ್ತಾ ಬಂದು ರಸ್ತೆ ಪಕ್ಕ ನಿಂತಿದ್ದ ನನಗೆ ಅನಾವಶ್ಯಕವಾಗಿ ಬೈದು ಹಲ್ಲೆ ಮಾಡಿದ್ದಾರೆ ಎಂದು ಅಭಿಷೇಕ್ ಮಾಜಿ ಶಾಸಕ ಸಂಜೀವ ಮಠಂದೂರು ಅವರಲ್ಲಿ ಹೇಳಿದ್ದಾರೆ. ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ ಜೀವಂಧರ್ ಜೈನ್, ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಸಹಿತ ಹಲವಾರು ಮಂದಿ ಹಿಂದು ಮುಖಂಡರು ಅಭಿಷೇಕ್ ಅವರ ಆರೋಗ್ಯ ವಿಚಾರಿಸಿದ್ದಾರೆ.

LEAVE A REPLY

Please enter your comment!
Please enter your name here