ಕೌಕ್ರಾಡಿ: ನಿವೃತ್ತ ಶಿಕ್ಷಕಿ ಜೆಸಿಂತಾ ಡಿ.ಸೋಜರಿಗೆ ಬೀಳ್ಕೊಡುಗೆ, ನಿವೃತ್ತ ಯೋಧ ಮಹಾಬಲರಿಗೆ ಗೌರವಾರ್ಪಣೆ

0

ನೆಲ್ಯಾಡಿ: ಕೌಕ್ರಾಡಿ ಸಂತ ಜಾನರ ಹಿ.ಪ್ರಾ.ಶಾಲೆಯಲ್ಲಿ 39 ವರ್ಷಗಳ ಸುದೀರ್ಘ ಕಾಲ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಸೇವಾ ನಿವೃತ್ತರಾದ ಜೆಸಿಂತಾ ಡಿ ಸೋಜ ಅವರಿಗೆ ಬೀಳ್ಕೊಡುಗೆ ಸಮಾರಂಭ ಜು.19ರಂದು ನಡೆಯಿತು. ಶಾಲಾ ಹಳೆ ವಿದ್ಯಾರ್ಥಿ ಹಾಗೂ ಭಾರತೀಯ ಸೇನೆಯಲ್ಲಿ ಜೂನಿಯರ್ ಕಮಿಷನಂಡ್ ಆಫೀಸರ್ (ಸುಬೇದಾರ್) ಆಗಿ 40 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಸೇವಾ ನಿವೃತ್ತರಾದ ಕೆ. ಮಹಾಬಲ ಅವರಿಗೆ ಗೌರವಾರ್ಪಣೆಯೂ ನಡೆಯಿತು.

ಶಾಲಾ ಸಂಚಾಲಕ ವಂ. ಜಗದೀಶ್ ಪಿಂಟೋ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಚೈತ್ರಾ ಅಭಿನಂದನಾ ಭಾಷಣ ಮಾಡಿದರು. ಧರ್ಮಗುರು ವಂ. ಅಶೋಕ್ ಡಿ.ಸೋಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದ.ಕ. ಜಿಲ್ಲಾ ಕಾರ್ಯದರ್ಶಿ ವಿಮಲ್ ಕುಮಾರ್, ನಿವೃತ್ತ ಮುಖ್ಯಶಿಕ್ಷಕ ಜೋಸೆಫ್ ಪಿರೇರಾ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಪ್ರವೀಣ್ ನೋಯೆಲ್ ಮೊಂತೆರೊ, ಕಾರ್ಯದರ್ಶಿ ವೀಣಾ ಮಾಡ್ತಾ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಹೆರಾಲ್ಡ್ ಗಲ್ಭಾಂವೋ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಜೆನೆವಿವ್ ಫೆರ್ನಾಂಡಿಸ್, ಗೌರವ ಶಿಕ್ಷಕಿ ಚಿತ್ರಾ ಅವರು ಸನ್ಮಾನ ಪತ್ರ ವಾಚಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ವರೂಪ ಶೆಟ್ಟಿ, ಪೋಷಕರಾದ ಗೀತಾ ಕುಟಿನ್ಹಾ ಅವರು ಸನ್ಮಾನಿತರ ಪರವಾಗಿ ಅನಿಸಿಕೆಗಳನ್ನು ತಿಳಿಸಿದರು.

ಶಾಲಾ ವಿದ್ಯಾರ್ಥಿ ನಾಯಕಿ ಪ್ರೆಸಿಲ್ಲಾ ಗಲ್ಭಾಂವೋ, ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಅಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ಜಸ್ವಂತ್ ಪಿರೇರಾ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿಗಳು, ಪೋಷಕ ಪ್ರತಿನಿಧಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಅಂಬಿಕಾ ಸಭಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಚೈತ್ರಾ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಅನಿಶಾ ವಾಸ್ ವಂದಿಸಿದರು.

LEAVE A REPLY

Please enter your comment!
Please enter your name here