ಜು.23: ಸವಣೂರಿನಲ್ಲಿ ಕೆಸರ್ಡ್ ಒಂಜಿ ದಿನ

0

ಸವಣೂರು: ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ಸವಣೂರು ಬಸದಿ ವಠಾರದ ನಿರ್ಮಲ್ ಕುಮಾರ್ ಜೈನ್ ಅವರ ಗದ್ದೆಯಲ್ಲಿ ಜು.23ರಂದು ನಡೆಯಲಿದೆ.

ಕಾರ್ಯಕ್ರಮಕ್ಕೆ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು ಚಾಲನೆ ನೀಡುವರು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಅಧ್ಯಕ್ಷತೆ ವಹಿಸುವರು.ನೋಟರಿ ನ್ಯಾಯವಾದಿ ನಿರ್ಮಲ್ ಕುಮಾರ್ ಜೈನ್ ಅವರು ಉದ್ಘಾಟಿಸುವರು. ಅತಿಥಿಗಳಾಗಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ಪುದುಬೆಟ್ಟು ಜಿನ ಬಸದಿಯ ಆಡಳಿತ ಮೊಕ್ತೇಸರ ಬಿ.ಶತ್ರುಂಜಯ ಆರಿಗ, ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ, ಸವಣೂರು ಪ್ರಾ.ಕೃ.ಸ.ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ, ಅಕ್ರಮ ಸಕ್ರಮ ಸಮಿತಿ ಮಾಜಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಜನಜಾಗೃತಿ ವೇದಿಕೆಯ ಕಡಬ ತಾಲೂಕು ಘಟಕದ ಅಧ್ಯಕ್ಷ ಮಹೇಶ್ ಕೆ.ಸವಣೂರು ಪಾಲ್ಗೊಳ್ಳುವರು. ಕೆಸರುಗದ್ದೆಯಲ್ಲಿ ವಾಲಿಬಾಲ್, ತ್ರೋಬಾಲ್ (ಮಹಿಳೆಯರಿಗೆ), ಅಪ್ಪಂಗಾಯಿ, ಕೆರುಗದ್ದೆ ಓಟ, ಅಡಿಕೆ ಹಾಳೆಯ ಜಾರುಬಂಡಿ, ಮಡಕೆ ಒಡೆಯುವುದು, ಹಗ್ಗಜಗ್ಗಾಟ,ಹ್ಯಾಂಡ್ ಬಾಲ್, ಹಿಮ್ಮುಖ ಓಟ,ಲಿಂಬೆ ಚಮಚ ಓಟ ಸೇರಿದಂತೆ ಮಕ್ಕಳಿಗೆ ಇನ್ನಿತರ ಆಟಗಳು ನಡೆಯಲಿದೆ ಎಂದು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ, ಕಾರ್ಯದರ್ಶಿ ಕೀರ್ತನ್ ಕೋಡಿಬೈಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here