ನೆಲ್ಯಾಡಿಗೆ ಸಂಸದರ ಭೇಟಿ ರದ್ದು-ಮೌನ ಪ್ರತಿಭಟನೆ, ಮನವಿ ಸಲ್ಲಿಕೆ ಮುಂದೂಡಿಕೆ

0

ನೆಲ್ಯಾಡಿ: ಸಂಸದ ನಳಿನ್‌ಕುಮಾರ್ ಕಟೀಲ್‌ರವರ ಜು.22ರ ನೆಲ್ಯಾಡಿ ಭೇಟಿ ಕಾರ್ಯಕ್ರಮ ರದ್ದುಗೊಂಡಿದ್ದು, ಈ ಹಿನ್ನೆಲೆಯಲ್ಲಿ ಉದ್ದೇಶಿತ ಮೌನ ಪ್ರತಿಭಟನೆ, ಮನವಿ ಸಲ್ಲಿಕೆ ಕಾರ್ಯಕ್ರಮವೂ ಮುಂದೂಡಿಕೆಯಾಗಿದೆ.


ಬಿ.ಸಿ.ರೋಡ್-ಅಡ್ಡಹೊಳೆ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ಈ ಸಂದರ್ಭ ನೆಲ್ಯಾಡಿ ಪೇಟೆಯಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆಸಿರುವುದರಿಂದ ಆಗಿರುವ ಸಮಸ್ಯೆ ಪರಿಹರಿಸುವಂತೆ ಸಂಸದರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಮಗಾರಿ ವೀಕ್ಷಣೆಗೆ ಸಂಸದರಾದ ನಳಿನ್‌ಕುಮಾರ್ ಕಟೀಲ್ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜು.22ರಂದು ಮಧ್ಯಾಹ್ನ 12 ಗಂಟೆಗೆ ನೆಲ್ಯಾಡಿ ಭೇಟಿಗೆ ನಿರ್ಧರಿಸಿದ್ದರು. ಆದರೆ ಸಂಸದರ ನೆಲ್ಯಾಡಿ ಭೇಟಿ ರದ್ದುಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮೌನ ಪ್ರತಿಭಟನೆ, ಮನವಿ ಸಲ್ಲಿಕೆಯೂ ಮುಂದೂಡಿಕೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here