ಶ್ರೀ ರಾಮಮಂದಿರ ನಿರ್ಮಾಣಕ್ಕೆ ಪೂರ್ಣಾವಧಿ ಕಾರ್ಯಕರ್ತರಾಗಿ ಆಯೋಧ್ಯೆಗೆ ತೆರಳಿದ ಕೆ.ಎಸ್.ಆರ್.ಟಿ.ಸಿ ನಿವೃತ್ತ ನಿರೀಕ್ಷಕ ಅಶೋಕ್

0

ಪುತ್ತೂರು: ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ನಿವೃತ್ತ ನಿರೀಕ್ಷಕ ಅಶೋಕ್ ಎಸ್ ರವರು ಅಗಸ್ಟ್ ತಿಂಗಳ ಪ್ರಾರಂಭದಿಂದ ಅಯೋಧ್ಯೆಯ ಶ್ರೀ ರಾಮ ಮಂದಿರದ ನಿರ್ಮಾಣ ಸಂಪೂರ್ಣವಾಗುವವರೆಗೆ ಪೂರ್ಣಾವಧಿ ಕಾರ್ಯಕರ್ತನಾಗಿ ಸೇವೆ ಸಲ್ಲಿಸಲು ಅಯೋಧ್ಯೆಗೆ ತೆರಳಿದ್ದಾರೆ.‌


ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಕಾರ್ಯಾಲಯದಲ್ಲಿ ಜು.21ರಂದು ಅವರನ್ನು ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣಪ್ರಸನ್ನ, ಜಿಲ್ಲಾ ಉಪಾಧ್ಯಕ್ಷ ಸತೀಶ ಬಿ. ಎಸ್. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here