ವಿಟ್ಲ: ಅಪಘಾತದ ಗಾಯಾಳು ನಿಧನ

0

ವಿಟ್ಲ: 1 ತಿಂಗಳ ಹಿಂದೆ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಟ್ಲ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಜು.22ರಂದು ಮಧ್ಯಾಹ್ನ ಆಸ್ಪತ್ರೆಯಲ್ಲಿ ನಿಧನರಾದರು.

ವಿಟ್ಲ ಕಸಬಾ ಗ್ರಾಮದ ನೆಕ್ಕಿಲಾರು ನಿವಾಸಿ ಜನಾರ್ದನ ಗೌಡ(50.ವ)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಜನಾರ್ದನ ಗೌಡರವರು ಜೂ.11ರಂದು ಮಧ್ಯಾಹ್ನ ತನ್ನ ಮನೆಯಿಂದ ವಿಟ್ಲ-ಕಲ್ಲಡ್ಕ ರಾಜ್ಯ ಹೆದ್ದಾರಿಯಲ್ಲಿ ತನ್ನ ದ್ವಿಚಕ್ರ ವಾಹನ(ಕೆಎ 21, ಡಬ್ಲ್ಯು5778)ದಲ್ಲಿ ಸಂಚರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಎರ್ಮೆಮಜಲು ಬಸ್‌ನಿಲ್ದಾಣದ ಬಳಿ ಕಲ್ಲಡ್ಕದಿಂದ ವಿಟ್ಲ ಕಡೆಗೆ ಬರುತ್ತಿದ್ದ ಲಾರಿ(ಕೆಎ 19 ಎಸಿ 3030)ಡಿಕ್ಕಿಯಾಗಿತ್ತು.

ಪರಿಣಾಮ ದ್ವಿಚಕ್ರ ವಾಹನ ಸವಾರ ಜನಾರ್ದನ ಗೌಡರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಅವರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನವೂ ಸಂಪೂರ್ಣ ಜಖಂಗೊಂಡಿತ್ತು. ಘಟನೆ ಕುರಿತಂತೆ ಅರೆಬೆಟ್ಟು ನಿವಾಸಿ ನಾಗರಾಜ ಶೆಟ್ಟಿ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ 40 ದಿನಗಳಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕೋಮಾ ಸ್ಥಿತಿಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದ ಜನಾರ್ದನ ಗೌಡರವರು ಜು.22ರಂದು ಮಧ್ಯಾಹ್ನ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here