ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಅಸ್ತಿತ್ವಕ್ಕೆ

0

ಅಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ, ಪ್ರಧಾನ ಕಾರ್ಯದರ್ಶಿ: ಜಿ.ಎಂ ಕಾಮಿಲ್ ಸಖಾಫಿ, ಕೋಶಾಧಿಕಾರಿ: ಇಸ್ಮಾಯಿಲ್ ಹಾಜಿ ಬೈತಡ್ಕ

ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ರಚನಾ ಸಭೆ ಜು.20ರಂದು ಪುತ್ತೂರು ರೊಟರಿ ಮನಿಷಾ ಹಾಲ್‌ನಲ್ಲಿ ನಡೆಯಿತು. ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಉಪಾಧ್ಯಕ್ಷರಾದ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ಅಧ್ಯಕ್ಷತೆ ವಹಿಸಿ ದುವಾ ನೆರವೇರಿಸಿದರು.


ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರ.ಕಾರ್ಯದರ್ಶಿ ಅಬೂ ಸುಫಿಯಾನ್ ಎಚ್.ಐ ಇಬ್ರಾಹಿಂ ಮದನಿ ಸಭೆ ಉದ್ಘಾಟಿಸಿ ಮಾತನಾಡಿದರು. ರಾಜ್ಯ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಎಸ್.ಪಿ ಹಂಝ ಸಖಾಫಿ ನೇತೃತ್ವದಲ್ಲಿ ಹದಿನಾಲ್ಕು ಪದಾಧಿಕಾರಿಗಳನ್ನೊಳಗೊಂಡ 31 ಸದಸ್ಯರ ನೂತನ ಈಸ್ಟ್ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಜಿ.ಮುಹಮ್ಮದ್ ಕಾಮಿಲ್ ಸಖಾಫಿ, ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಹಾಜಿ ಬೈತಡ್ಕರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here