![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನಿಡ್ಪಳ್ಳಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ದೆ ಉಪ್ಪಳಿಗೆ ಇಲ್ಲಿ ಜು.22 ರಂದು ಶಾಲಾ ಮಕ್ಕಳ ಪೋಷಕರು, ಎಸ್ ಡಿಎಂಸಿ ಸದಸ್ಯರು ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಇರ್ದೆ – ಬೆಟ್ಟಂಪಾಡಿ ಇವರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
![](https://puttur.suddinews.com/wp-content/uploads/2023/07/ed5249099ea74af48c0cc9edd4948fdd.jpg)
ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷರಾದ ಆನಂದ ಕಳೆಂಜಿಲ ಸಂಯೋಜಕಿ ಪದ್ಮಾವತಿ.ಡಿ ಹಾಗೂ ಸದಸ್ಯರು ಮತ್ತು ಎಸ್ ಡಿಎಂಸಿ ಅಧ್ಯಕ್ಷ ಲೋಕನಾಥ ಆಚಾರ್ಯ, ಮಾಜಿ ಅಧ್ಯಕ್ಷ ನಿತ್ಯಾನಂದ ಬೈಲಾಡಿ ಹಾಗೂ ಎಸ್ ಡಿಎಂಸಿ ಸದಸ್ಯರು ಮಕ್ಕಳ ಪೋಷಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶಾಲಾ ಮುಖ್ಯಗುರು ಲಿಂಗಮ್ಮ ಹಾಗೂ ಶಿಕ್ಷಕ ವೃಂದದವರು ಸಹಕರಿಸಿದರು.