ನೆಲ್ಯಾಡಿ ಶ್ರೀರಾಮ ವಿದ್ಯಾಲಯಕ್ಕೆ ಕೊಡುಗೆ

0

ನೆಲ್ಯಾಡಿ: ನಿವೃತ್ತ ಪ್ರಾಂಶುಪಾಲ ಎಸ್. ದುಗ್ಗಪ್ಪ ಗೌಡರವರು ತಮ್ಮ ಮಾತೃಶ್ರೀ ಸಬಳೂರು ಶ್ರೀಮತಿ ಎಲ್ಯಕ್ಕರವರ ಸವಿ ನೆನಪಿಗಾಗಿ ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ಗ್ರಂಥಾಲಯಕ್ಕೆ 6 ಕವಾಟು ಮತ್ತು 12 ಸಾವಿರ ರೂಪಾಯಿಯ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.


ಜು.21ರಂದು ವಿದ್ಯಾಲಯದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ದುಗ್ಗಪ್ಪ ಗೌಡ ಅವರು ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಸಮ್ಮುಖದಲ್ಲಿ ವಿದ್ಯಾಲಯದ ಆಡಳಿತ ಸಮಿತಿಯ ಕಾರ್ಯದರ್ಶಿ ಮೂಲಚಂದ್ರ ಕಾಂಚನರವರಿಗೆ ಕಪಾಟುಗಳ ಕೀ ಯನ್ನು ಹಸ್ತಾಂತರಿಸಿದರು. ಬಳಿಕ ಮಾತನಾಡಿದ ದುಗ್ಗಪ್ಪ ಗೌಡ ಅವರು, ವಿದ್ಯಾರ್ಥಿಗಳಿಗೆ ಗ್ರಂಥಾಲಯದ ಬಳಕೆ ಬಗ್ಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ, ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ಆಡಳಿತ ಸಮಿತಿ ಸದಸ್ಯರಾದ ಸುಬ್ರಾಯ ಪುಣಚ, ಮಾಧವ ಕುಡ್ತಾಜೆ, ಶಾಲಾ ಮುಖ್ಯಶಿಕ್ಷಕ ಗಣೇಶ್ ವಾಗ್ಲೆ, ಶಾಲಾ ಶಿಕ್ಷಕ, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here