ಕೋಡಿಂಬಾಡಿ: ಮನೆಯೊಳಗೆ ನುಗ್ಗಿದ ಮಳೆ ನೀರು – ಘಟನಾ ಸ್ಥಳಕ್ಕೆ ಶಾಸಕರ ಭೇಟಿ

0

ಪುತ್ತೂರು: ಕೋಡಿಂಬಾಡಿ ಗ್ರಾಮದ ಪರಬಪಾಲು ಎಂಬಲ್ಲಿ ಮಳೆ ನೀರು ಮನೆಯೊಳಗೆ ನುಗ್ಗಿ ಮನೆಯವರು ತೊಂದರೆಗೆ ಸಿಲುಕಿದ್ದು, ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಬಪಾಲು ನಿವಾಸಿ ಲೀಲಾವತಿ ಎಂಬವರ ಮನೆಯ ಪಕ್ಕದ ಮನೆಯವರ ಆವರಣಗೋಡೆ ಕುಸಿದು ಬಿದ್ದ ಕಾರಣ ಮಳೆ ನೀರು ಲೀಲಾವತಿಯವರ ಮನೆಯೊಳಗೆ ಬಂದಿತ್ತು. ಮನೆಯವರು ತೊಂದರೆಗೆ ಸಿಲುಕಿರುವ ಮಾಹಿತಿ ಪಡೆದ ಶಾಸಕರು ತಕ್ಷಣವೇ ಸ್ಥಳಕ್ಕೆ ಭೇಟಿ ಅಧಿಕಾರಿಗಳಿಗೆ ಮಾಹಿತಿ ನೀಡಿ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ. ಘಟನಾ ಸ್ಥಳಕ್ಕೆ ತಹಶಿಲ್ದಾರ್ ಭೇಟಿ ನೀಡಿದ್ದು, ಮನೆಯವರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡುವಂತೆ ತಹಶೀಲ್ದಾರ್‌ರವರಿಗೆ ಶಾಸಕರು ಸೂಚನೆಯನ್ನು ನೀಡಿದ್ದಾರೆ.

LEAVE A REPLY

Please enter your comment!
Please enter your name here