ಕೊಡಗಿನ ಮದೆನಾಡಿನಲ್ಲಿ ಭೂಕುಸಿತ: ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ

0

ಪುತ್ತೂರು: ಕಳೆದ ಕೆಲವು ದಿನಗಳಿಂದ ಕೊಡಗಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಡಗಿನ ಮದೆನಾಡು ಸಮೀಪದ ಕರ್ತೋಜೆಯಲ್ಲಿ ಮರ ಸಹಿತ ಭೂಕುಸಿತ ಉಂಟಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ.

ಈ ಪ್ರದೇಶದಲ್ಲಿ ಇನ್ನಷ್ಟು ಭೂಕುಸಿತದ ಸಾಧ್ಯತೆ ಎದುರಾಗಿದ್ದು, ಆತಂಕ ಸೃಷ್ಟಿಸಿದೆ. ಕಾರ್ಯಪ್ರವೃತ್ತವಾದ ಕೊಡಗು ಜಿಲ್ಲಾಡಳಿತ ಜೆಸಿಬಿ, ಹಿಟಾಚಿ ಯಂತ್ರಗಳನ್ನು ಬಳಸಿ ಮಳೆಯ ನಡುವೆಯೂ ಕಾರ್ಯಾಚರಣೆ ಆರಂಭಗೊಳಿಸಿದೆ. ಕೊಯ್ನಾಡು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

LEAVE A REPLY

Please enter your comment!
Please enter your name here