ಕಾಣಿಯೂರಿನಲ್ಲಿ ಮದ್ಯವರ್ಜನಾ ಶಿಬಿರ – ಕಡಬದಲ್ಲಿ ಜಿಲ್ಲಾ ನಿರ್ದೇಶಕರೊಂದಿಗೆ ಸಭೆ

0

ಕಾಣಿಯೂರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಕಡಬ ಇದರ ವತಿಯಿಂದ 1700 ಮದ್ಯವರ್ಜನ ಶಿಬಿರ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ಪೂರ್ವಭಾವಿ ಸಭೆಯು ಕಡಬ ಯೋಜನಾಧಿಕಾರಿಗಳ ಕಚೇರಿಯಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ದ.ಕ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಉದಯ ರೈ ಮಾದೋಡಿ, ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ. ಸವಣೂರು, ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು, ಸಮಿತಿಯ ಕೋಶಾಧಿಕಾರಿ ಸುರೇಶ್ ಓಡಬಾಯಿ, ಜತೆ ಕಾರ್ಯದರ್ಶಿ ಜಯಂತ ಅಬೀರ, ಯೋಜನೆಯ ಸವಣೂರು ವಲಯ ಮೇಲ್ವಿಚಾರಕಿ ಹರ್ಷ ಕುಮಾರಿ ಹಾಗೂ ತಾಲೂಕಿನ ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here