ಬೊಳಿಕ್ಕಲ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು: ಬೊಳಿಕ್ಕಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಎಸ್‌ಡಿಎಂಸಿ ಮತ್ತು ಪೋಷಕರ ವತಿಯಿಂದ ಶಾಲಾ ಆವರಣದ ಸ್ವಚ್ಛತಾ ಕಾರ್ಯಕ್ರಮವನ್ನು ಶ್ರಮದಾನದ ಮೂಲಕ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಅಲ್ಲಲ್ಲಿ ನೀರು ನಿಲ್ಲುವ ಜಾಗವನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿದುಹೋಗುವಂತೆ ಮಾಡಲಾಯಿತು. ಅಲ್ಲದೆ ತೆಂಗಿನ ಮರದ ಬುಡಗಳಿಗೆ ಸೊಪ್ಪು ಹಾಕಲಾಯಿತು. ಅಕ್ಷರ ದಾಸೋಹ ಕೊಠಡಿಯನ್ನು ಸ್ವಚ್ಚಗೊಳಿಸಲಾಯಿತು. ಎಸ್‌ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕ ವೃಂದದವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here