ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಜ್ಯೋತಿಪ್ರಕಾಶ್ ಪುಣಚ, ಕಾರ್ಯದರ್ಶಿಯಾಗಿ ಹೇಮಾ ಜಯರಾಂ ಆಯ್ಕೆ

0

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ಸುಳ್ಯ ಸುದ್ದಿ ಬಿಡುಗಡೆಯ ನಿಯೋಜಿತ ಸಂಪಾದಕ ಹರೀಶ್ ಬಂಟ್ವಾಳ್, ಉಪಾಧ್ಯಕ್ಷರಾಗಿ ಪುತ್ತೂರು ಸುದ್ದಿ ಬಿಡುಗಡೆ ಹಿರಿಯ ವರದಿಗಾರ ಜ್ಯೋತಿಪ್ರಕಾಶ್ ಪುಣಚ, ಕಾರ್ಯದರ್ಶಿಯಾಗಿ ಸುದ್ದಿ ನ್ಯೂಸ್ ಚಾನೆಲ್ ನಿರೂಪಕಿ ಹೇಮಾ ಜಯರಾಂ ರೈ ಕುರಿಯ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾದ ವಿಟಿವಿ ಮುಖ್ಯಸ್ಥ ರಾಮದಾಸ ಶೆಟ್ಟಿ ವಿಟ್ಲ ಆಯ್ಕೆಯಾಗಿದ್ದಾರೆ.

ಯೂನಿಯನ್ ಮಹಾಸಭೆ ಕೆ.ಜೆ.ಯು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್ ಲ್ಯಾಂಡ್ ಹೋಟೆಲ್ ಸಭಾಭವನದಲ್ಲಿ ಜು.25ರಂದು ಜರಗಿತು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ತಾರನಾಥ ಗಟ್ಟಿ ಕಾಪಿಕಾಡ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರು ಕೆ.ಜೆ.ಯು. ಘಟಕದ ಕಾರ್ಯಚಟುವಟಿಕೆಗಳ ಕುರಿತು ತಿಳಿಸಿದರು. ಬಳಿಕ ಮುಂದಿನ ಅವಧಿಗೆ ನೂತನ ಜಿಲ್ಲಾ ಸಮಿತಿಯನ್ನು ನೇಮಕ ಮಾಡಲಾಯಿತು. ಜಿಲ್ಲಾ ಸಮಿತಿಯ ಗೌರವಾಧ್ಯಕ್ಷರಾಗಿ ಸುಳ್ಯ ಸುದ್ದಿ ಬಿಡುಗಡೆ ಪತ್ರಿಕೆಯ ನಿಯೋಜಿತ ಸಂಪಾದಕ ಹರೀಶ್ ಬಂಟ್ವಾಳ್, ಗೌರವ ಸಲಹೆಗಾರರಾಗಿ ರಿಚರ್ಡ್ ಲಸ್ರಾದೋ, ನೂತನ ಅಧ್ಯಕ್ಷರಾಗಿ ವಿ4 ಚಾನೆಲ್ ಪ್ರಧಾನ ಸಂಪಾದಕ ತಾರನಾಥ ಗಟ್ಟಿ ಕಾಪಿಕಾಡು, ಪ್ರಧಾನ ಕಾರ್ಯದರ್ಶಿಯಾಗಿ ಕೆನ್ಯೂಟ್ ಪಿಂಟೋ, ಕೋಶಾಧಿಕಾರಿಯಾಗಿ ಗಿರಿಧರ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ವಿಟ್ಲ ಆಯ್ಕೆಯಾದರು.


ಉಪಾಧ್ಯಕ್ಷರುಗಳಾಗಿ ಮಂದಾರ ರಾಜೇಶ್ ಭಟ್, ಲಕ್ಷ್ಮಣ ಕುಂದರ್, ಶರೀಫ್ ಜಟ್ಟಿಪಳ್ಳ, ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರ ಜ್ಯೋತಿ ಪ್ರಕಾಶ್ ಪುಣಚ ಆಯ್ಕೆಯಾದರು. ಕಾರ್ಯದರ್ಶಿಗಳಾಗಿ ವಾಯ್ಲೆಟ್ ಪಿರೇರಾ, ಪೂಜಾಶ್ರೀ ವಿತೇಶ್ ಕೋಡಿ, ಪುತ್ತೂರು ಸುದ್ದಿ ನ್ಯೂಸ್ ಚಾನೆಲ್ ನಿರೂಪಕಿ ಹೇಮಾ ಜಯರಾಂ ರೈ ಕುರಿಯ, ಗಣೇಶ್ ಕುಕ್ಕುದಡಿ ಆಯ್ಕೆಯಾದರು.

ಸದಸ್ಯತ್ವ ಅಭಿಯಾನದ ಸಂಚಾಲಕರಾಗಿ ಈಶ್ವರ ವಾರಣಾಶಿಯವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಈಶ್ವರ ವಾರಣಾಶಿ, ಗೋಪಾಲ ಅಂಚನ್, ಶಿವಪ್ರಸಾದ್ ಆಲೆಟ್ಟಿ, ಜರ್ನಲಿಸ್ಟ್ ಯೂನಿಯನ್ ಪುತ್ತೂರು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ, ಜಯಶ್ರೀ ಕೊಯಿಂಗೋಡಿ, ಶ್ರೀಧರ ಕಜೆಗದ್ದೆ, ರಮೇಶ್ ಪೆರ್ಲ, ರಮೇಶ್ ನೀರಬಿದಿರೆ, ವಿನಯ್ ಜಾಲ್ಲೂರು, ಕೆ.ಟಿ. ಬಾಗೀಶ್ ಕೊಯಿಕುಳಿ, ವಿನಯ್ ಕಲ್ಮಡ್ಕ, ಕುಶಾಂತ್ ಕೊರತ್ಯಡ್ಕ, ಧನರಾಜ್, ರಮ್ಯಾ ಸತೀಶ್ ಕಳಂಜ, ರೇಖಾ ಸುಭಾಷ್, ಫ್ಲಾಯ್ಡ್ ಜೀವನ್ ಫರ್ನಾಂಡೀಸ್ ಆಯ್ಕೆಯಾದರು. ಸಭೆಯಲ್ಲಿ ಕೆಜೆಯು ಸದಸ್ಯತ್ವದ ಬಗ್ಗೆ ಚರ್ಚೆ ನಡೆಯಿತು.

ವೇದಿಕೆಯಲ್ಲಿ ಕೆ.ಜೆ.ಯು. ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ, ಜ್ಯೋತಿಪ್ರಕಾಶ್ ಪುಣಚ, ರಿಚರ್ಡ್ ಲಸ್ರಾದೋ, ತಾರನಾಥ ಗಟ್ಟಿ ಕಾಪಿಕಾಡು, ಕೆನ್ಯೂನ್ ಪಿಂಟೋ ಉಪಸ್ಥಿತರಿದ್ದರು. ಕೆ.ಜೆ.ಯು. ದ.ಕ. ಜಿಲ್ಲಾ ಘಟಕದ ಪದಾಧಿಕಾರಿಗಳು, ತಾಲೂಕು ಘಟಕದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here