ನೆಟ್ಟಾರಿನಲ್ಲಿ ಬಿಜೆಪಿಯ ಯುವ ಮುಖಂಡ, ದಿ.ಪ್ರವೀಣ್ ನೆಟ್ಟಾರು ಅವರ ಸ್ಮೃತಿದಿನ

0

ಬೆಳ್ಳಾರೆ: 2022ರ ಜು.26ರಂದು ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಸ್ಮರಣೆಯ ಅಂಗವಾಗಿ ದಿ. ಪ್ರವೀಣ್ ನೆಟ್ಟಾರು ಅವರ ಮನೆಯ ಬಳಿ ಇರುವ ಸ್ಮಾರಕದಲ್ಲಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರ್, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್, ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ, ಸುಭೋದ್ ಶೆಟ್ಟಿ ಮೇನಾಲ,ಬಿಜೆಪಿ ಯುವಮೋರ್ಚಾ ಸುಳ್ಯ ಮಂಡಲ ಅಧ್ಯಕ್ಷ ಕೃಷ್ಣ ಎಂ.ಆರ್., ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ್ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನಾ ಪ್ರವೀಣ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here