ಹಿರಿಯರ ಸೇವಾ ಪ್ರತಿಷ್ಠಾನದಿಂದ ಕಾಂಪೌಂಡರ್ ನರಸಿಂಹ ಭಟ್‌ರಿಗೆ ಅಭಿನಂದನೆ

0

ಪುತ್ತೂರು: ಸುಮಾರು ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಪೌಂಡರ್ ಆಗಿ ಜನಪ್ರಿಯರಾಗಿದ್ದು ಇತ್ತೀಚೆಗೆ ನಿವೃತ್ತರಾದ ಕಾಂಪೌಂಡರ್ ನರಸಿಂಹ ಭಟ್ ಅವರ ಹಾರಾಡಿ ನಿವಾಸಕ್ಕೆ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳು ಭೇಟಿ ನೀಡಿ ಅವರ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.
ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಸಹ ಸಂಚಾಲಕ ಭಾಸ್ಕರ ಬಾರ್ಯ, ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಪ್ರೊ.ವೇದವ್ಯಾಸ ರಾಮಕುಂಜ, ಪುತ್ತೂರು ಘಟಕದ ಚಂದ್ರಶೇಖರ ಆಳ್ವ ಪಡುಮಲೆ, ಪ್ರಶಾಂತ್ ಭಟ್ ಹಾರಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here