ಆರ್ಯಾಪು ಮತ್ತು ನಿಡ್ಪಳ್ಳಿ ಗ್ರಾ.ಪಂ ಮರು ಚುನಾವಣೆ ರಿಸಲ್ಟ್ – ಶಾಸಕ ಅಶೋಕ್ ಕುಮಾರ್ ರೈ ರಿಯಾಕ್ಷನ್

0

ಪುತ್ತೂರು: ಆರ್ಯಾಪು ಮತ್ತು ನಿಡ್ಪಳ್ಳಿ ಗ್ರಾ.ಪಂ. ಮರು ಚುನಾವಣೆ ಫಲಿತಾಂಶದ ಬಗ್ಗೆ ಶಾಸಕ ಅಶೋಕ್ ಕುಮಾರ್ ರೈ ಪ್ರತಿಕ್ರಿಯಿಸಿದ್ದು, ನಿರೀಕ್ಷೆಯಂತೆ ಎರಡು ಸ್ಥಾನಗಳ ಪೈಕಿ ಒಂದನ್ನು ಕಾಂಗ್ರೆಸ್ ಗೆದ್ದು ಕೊಂಡಿದೆ. ಒಂದನ್ನು ಬೇರೊಂದು ಪಾರ್ಟಿ ಗೆದ್ದುಕೊಂಡಿದೆ. ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಿದ್ದು, ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಜನ ಖಂಡಿತವಾಗಿಯೂ ಕಾಂಗ್ರೆಸ್ಸಿಗೆ ಮತ ಹಾಕುತ್ತಾರೆ. ಕಾಂಗ್ರೆಸ್ಸಿನ 5 ಗ್ಯಾರಂಟಿ ಯೋಜನೆ ಎಲ್ಲರಿಗೂ ಸಿಗುವಂತೆ ಪಕ್ಷ ಕ್ರಮ ಕೈಗೊಂಡಿದೆ. ಈ ಮೂಲಕ ಮುಂದಿನ ತಾ.ಪಂ. ಜಿ.ಪಂ., ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಅಶೋಕ್ ರೈ ಹೇಳಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here