ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ- ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

0

ನೆಲ್ಯಾಡಿ: ಕೊಕ್ಕಡ ಕಪಿಲಾ ಘಟಕದ ಹಿರಿಯ ಸದಸ್ಯೆ ಜೆಸಿಂತಾ ಡಿ’ಸೋಜ ಅವರಿಗೆ ಪಂಚರತ್ನ ಪುರಸ್ಕಾರ ಅನ್ವಯ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಜೆಸಿಐ ಶಂಕರನಾರಾಯಣ ಘಟಕದ ಆತಿಥ್ಯದಲ್ಲಿ ಜು.23ರಂದು ಹಾಲಾಡಿಯಲ್ಲಿ ಶಾಲಿನಿ ಜಿ. ಶಂಕರ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ವಲಯ 15ರ ಅಭಿವೃದ್ಧಿ ಮತ್ತು ವ್ಯವಹಾರ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೊಕ್ಕಡ ಘಟಕ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರಿಗೆ ಈ ವರ್ಷ ಮಾಡಿದ ಸಾಧನೆಗೆ ಶೈನಿಂಗ್ ಪವರ್ ಸ್ಟಾರ್ ಅಧ್ಯಕ್ಷರು ಹಾಗೂ ಟಾಪ್ ೮ ಘಟಕ ಎಂಬ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ರಾಯನ್ ಉದಯ ಕ್ರಾಸ್ತಾ, ವ್ಯವಹಾರ ವಿಭಾಗದ ನಿರ್ದೇಶಕ ನಾಗರಾಜ್ ಪೂಜಾರಿ, ವಲಯ ಆಡಳಿತ ಮಂಡಳಿಯ ಮರಿಯಪ್ಪ, ಉಷಾ ಕಲ್ಮಾಡಿ, ವಲಯ ಉಪಾಧ್ಯಕ್ಷರು, ಕೊಕ್ಕಡ ಕಪಿಲಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here