ಕಡಬದ ಶ್ರೇಯಾ ಸಿ.ಪಿ. ಅವರಿಗೆ ರಾಜ್ಯಮಟ್ಟದ ಜನಸ್ಪಂದನಾ ಕಲಾಸಿರಿ ರತ್ನ ಪ್ರಶಸ್ತಿ ಪ್ರಧಾನ

0

ಕಡಬ: ಬೆಂಗಳೂರಿನ ಬಾಗಲಗುಂಟೆಯಲ್ಲಿ ಜು.23 ರಂದು ಕರ್ನಾಟಕ ಜನಸ್ಪಂದನಾ ಟ್ರಸ್ಟ್ ಇದರ 6 ನೇ ವರ್ಷದ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಟ್ರಸ್ಟಿನ ವತಿಯಿಂದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯಿಂದ ಗುರುತಿಸಲ್ಪಟ್ಟು ರಾಜ್ಯಮಟ್ಟದ ಪ್ರತಿಷ್ಠಿತ ಕರ್ನಾಟಕ ಜನಸ್ಪಂದನ ಕಲಾಸಿರಿ ರತ್ನ ಪ್ರಶಸ್ತಿಯನ್ನು ಕಡಬದ ಶ್ರೇಯಾ ಸಿ. ಪಿ ಯವರಿಗೆ ನೀಡಲಾಯಿತು.

ಕರ್ನಾಟಕ ಜನಸ್ಪಂದನಾ ಟ್ರಸ್ಟ್ ಇದರ ಸಂಸ್ಥಾಪಕ, ರಾಜ್ಯಾಧ್ಯಕ್ಷರಾದ ಹನುಮಂತ ಎಸ್ ಮೇಡೆಗಾರರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಮ. ಘ.ಚ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿ ಉಪಸ್ಥಿತರಿದ್ದು, ಮುಖ್ಯ ಅತಿಥಿಗಳಾಗಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಮುನಿರಾಜುರವರು ಸೇರಿದಂತೆ ಹಲವಾರು ಗಣ್ಯ ಅತಿಥಿಗಳು ಉಪಸ್ಥಿತರಿದ್ದರು. ಕಡಬದ ವಿದ್ಯಾನಗರದ ದಿ. ಚಿದಾನಂದ ಪೂಜಾರಿ ಹಾಗೂ ಪ್ರೇಮಾ ದಂಪತಿಗಳ ಪುತ್ರಿಯಾದ ಶ್ರೇಯಾ ಸಿ. ಪಿ ಯವರು ಪದವಿ ಶಿಕ್ಷಣವನ್ನು ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here