ಅರಿಯಡ್ಕ: ವಲಯ ಮಟ್ಟದ ಚದುರಂಗ ಸ್ಪರ್ಧೆ

0

ಅರಿಯಡ್ಕ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು, ಸರಕಾರಿ ಪ್ರೌಢಶಾಲೆ ಪಾಪೆಮಜಲು ಸಹಯೋಗದಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಚದುರಂಗ ಸ್ಪರ್ಧೆ ಜು.24ರಂದು ಸರ್ಕಾರಿ ಪ್ರೌಢಶಾಲೆ ಪಾಪೆಮಜಲು ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಗತಿ ಪರ ಕೃಷಿಕ ಗುಂಡ್ಯಡ್ಕ ವಾಸು ಪೂಜಾರಿಯವರು ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿದರು.

ವೇದಿಕೆಯಲ್ಲಿ ಶಿಕ್ಷಣ ಸಂಯೋಜಕ ನವೀನ್ ಸ್ಟೀಫನ್ ವೇಗಸ್, ಪ್ರೌಢಶಾಲಾ ವಿಭಾಗದ ದೈ.ಶಿಕ್ಷಣ ಸಂಘದ ಅಧ್ಯಕ್ಷ ಸೀತಾರಾಮ ಗೌಡ, ಪುತ್ತೂರು ಗ್ರಾಮಾಂತರ ವಲಯದ ಪ್ರೌಢಶಾಲಾ ವಿಭಾಗದ ಚದುರಂಗ ಸ್ಪರ್ಧೆಯ ನೋಡೆಲ್ ಶಿಕ್ಷಕಿ ಸಜಿಲ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಅಮ್ಮಣ್ಣ ರೈ ಡಿ.ಪಾಪೆಮಜಲು, ನಿಕಟ ಪೂರ್ವ ಅಧ್ಯಕ್ಷ ತಿಲಕ್ ರೈ ಕುತ್ಯಾಡಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಮೋನಪ್ಪ ಬಿ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ವತಿಯಿಂದ ಪಂದ್ಯಾಟ ನಡೆಸಲು ಸಂಸ್ಥೆಯ ಗಣಿತ ಶಿಕ್ಷಕ ಹರಿಪ್ರಸಾದ್ ರವರಿಗೆ ವೀಳ್ಯ ನೀಡಲಾಯಿತು.
ಸಂಸ್ಥೆಯ ದೈ.ಶಿಕ್ಷಣ ಶಿಕ್ಷಕಿ ಪ್ರವೀಣ ರೈ ಸ್ವಾಗತಿಸಿ, ಹಿರಿಯ ಶಿಕ್ಷಕಿ ಪೂರ್ಣಿಮಾ ಶೆಟ್ಟಿ ವಂದಿಸಿದರು. ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here