ಚೆಸ್: ಕಾಂಚನ ಶಾಲೆಯ ಚೇತನ್ ತಾಲೂಕು ಮಟ್ಟಕ್ಕೆ ಆಯ್ಕೆ

0

ನೆಲ್ಯಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಇದರ ಆಶ್ರಯದಲ್ಲಿ ಗೋಳಿತ್ತೊಟ್ಟು ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿದ್ದ ಕಾಂಚನ ಶ್ರೀ ಲಕ್ಷ್ಮಿ ನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ 6ನೇ ತರಗತಿ ವಿದ್ಯಾರ್ಥಿ ಚೇತನ್ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನಾಲ್ಕನೇ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಚರಣ್ ಎಸ್ ಮತ್ತು ತೃತೀಯ ಹಾಗೂ ಆರನೇ ತರಗತಿಯ ರೋಹಿಣಿ ಈ ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹೇಮೋದರ್‌ರವರು ತರಬೇತಿ ನೀಡಿದ್ದರು. ಶಾಲಾ ಮುಖ್ಯಗುರು ಎ.ಲಕ್ಷ್ಮಣ ಗೌಡ ಹಾಗೂ ಶಿಕ್ಷಕರು ಸಹಕರಿಸಿದರು.

LEAVE A REPLY

Please enter your comment!
Please enter your name here