ಬಡಗಬೆಳ್ಳೂರಿನಲ್ಲಿ ವ್ಯಕ್ತಿಯೋರ್ವರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣ – ಪುತ್ತೂರು ಮೂಲದ ವ್ಯಕ್ತಿಯನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

0

ವಿಟ್ಲ: ಬಡಗಬೆಳ್ಳೂರಿನಲ್ಲಿ ವ್ಯಕ್ತಿಯೋರ್ವರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪೋಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಪುತ್ತೂರು ಮೂಲದ ಆರೋಪಿಯೋರ್ವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.


ಪುತ್ತೂರು ತಾಲೂಕಿನ ಕುದ್ಮಾರ್ ಬರೆಪಾಡಿ ನಿವಾಸಿ ರೋಷನ್ (32 ವ.) ರವರು ಬಂಧಿತ ಆರೋಪಿಯಾಗಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ತಂಡವೊಂದು ಬಡಗಬೆಳ್ಳೂರಿನ ವ್ಯಕ್ತಿಯೋರ್ವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು, ಆರೋಪಿಗಾಗಿ ಶೋಧ ಕಾರ್ಯ ಕೂಡ ನಡೆಸಲಾಗಿತ್ತಾದರೂ ಆರೋಪಿ ಪತ್ತೆಯಾಗಿರಲಿಲ್ಲ.
ಇದೀಗ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಹಾಗೂ ಅಪರಾಧ ವಿಭಾಗದ ಎಸ್‌. ಐ ಮೂರ್ತಿ ರವರ ನೇತ್ರತ್ವದಲ್ಲಿ ಸಿಬ್ಬಂದಿ ಗಳಾದ ಗಣೇಶ್ ಪ್ರಸಾದ್, ಯೋಗೀಶ್, ಹಾಗೂ ವಿಜಯ್ ರವರು ಆರೋಪಿ ಮಂಗಳೂರಿನಲ್ಲಿರುವ ಬಗ್ಗೆ ಮಾಹಿತಿ ಅರಿತು ಅಲ್ಲಿಗೆ ತೆರಳಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here