ದರ್ಬೆ ವಿನಾಯಕ ನಗರದ 41ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಹಾಗು ಸಂತ ಫಿಲೋಮಿನಾ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ದರ್ಬೆ ವಿನಾಯಕ ನಗರದಲ್ಲಿ ಸೆ.19 ಮತ್ತು 20ರಂದು ನಡೆಯುವ 41ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರವನ್ನು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡಗಡೆಗೊಳಿಸಲಾಯಿತು.


ಸಮಿತಿ ಸದಸ್ಯರು ಬೆಳಿಗ್ಗೆ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಆಮಂತ್ರಣವನ್ನಿಟ್ಟ ಬಳಿಕ ವೇ ಮೂ ಹರೀಶ್ ಭಟ್ ಪ್ರಾರ್ಥಿಸಿದರು. ಬಳಿಕ ಸುಜಾತ ರೆಸ್ಟೋರೆಂಟ್‌ನ ಮಾಲಕ ಸುಶಾಂ ಶೆಟ್ಟಿ, ನಾಯರ್ ಕನ್‌ಸ್ಟ್ರಕ್ಷನ್‌ನ ಮಾಲಕ ಸೂರಜ್ ನಾಯರ್ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭ ಟ್ರಸ್ಟ್‌ನ ಅಧ್ಯಕ್ಷ ಪ್ರಕಾಶ್ ಮುಕ್ರಂಪಾಡಿ, ಕಾರ್ಯದರ್ಶಿ ಶಿವಪ್ರಸಾದ್, ದುರ್ಗಾಪ್ರಸಾದ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ವಿಕ್ರಮ್ ಆಳ್ವ, ಕಾರ್ಯದರ್ಶಿ ಹೃದಯ್ ಎಸ್.ನಾಕ್, ಜೊತೆ ಕಾರ್ಯದರ್ಶಿ ರಕ್ಷಾ ಅಂಚನ್ ಸಹಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here