:ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ- ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

0

ಪುತ್ತೂರು:ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವದ ಅಂಗವಾಗಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಈಶ್ವರಮಂಗಲ ವಲಯದ ಮಾಡ್ನೂರು ಗ್ರಾಮದ ಕಾವು ಘಟಸಮಿತಿಯ ಸದಸ್ಯರಿಂದ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಶೇಕರ ರಾವ್ ನಿಧಿಮುಂಡ ಜ್ಯೋತಿ ಬೆಳಗಿಸುವ ಮೂಲಕ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪರಮ ಪೂಜ್ಯ ಶ್ರೀಗಳವರ ಜನ್ಮ ದಿನೋತ್ಸವದ ಪ್ರಯುಕ್ತ ಪ್ರತಿ ವರ್ಷ ಈ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸುತ್ತಿರುವುದು ತುಂಬಾ ಸಂತೋಷದ ವಿಚಾರ, ಗ್ರಾಮ ವಿಕಾಸ ಯೋಜನೆಯಿಂದ ಇನ್ನೂ ಉತ್ತಮ ಕೆಲಸ ಕಾರ್ಯಗಳು ನಡೆಸಲು ಶ್ರೀ ದೇವರ ಅನುಗ್ರಹ ನಮ್ಮೆಲ್ಲರ ಮೇಲಿರಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಘಟ ಸಮಿತಿ ಅಧ್ಯಕ್ಷ ಶಿವರಾಮ ಪೂಜಾರಿ ಕೆರೆಮಾರು, ಈಶ್ವರಮಂಗಲ ವಲಯ ಸಂಯೋಜಕಿ ಮಹಿತ ರೈ, ಗ್ರಾಮದ ಸೇವಾಧೀಕ್ಷಿತೆ ಅಮೃತ, ಪದಾಧಿಕಾರಿಗಳಾದ ಕಸ್ತೂರಿ ರೈ, ಹರಿಣಿ, ಅವಿನಾಶ್, ಕೇಶವ ಹಾಗೂ 36 ಮಂದಿ ಸದಸ್ಯರು ಉಪಸ್ಥಿತಿದ್ದರು. ಶಿವರಾಮ ಪೂಜಾರಿ ಸ್ವಾಗತಿಸಿ,ವಂದಿಸಿದರು.

LEAVE A REPLY

Please enter your comment!
Please enter your name here