ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 2 ರ್‍ಯಾಂಕ್‌ಗಳು

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2022-23ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 2 ರ್‍ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ.


ಕಾಲೇಜಿನ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಜಾಗೃತಿ.ಜೆ.ನಾಯಕ್ 9.59 ಸಿಜಿಪಿಎ ಅಂಕಗಳೊಂದಿಗೆ 4ನೇ ರ್‍ಯಾಂಕ್ ಹಾಗೂ ದಿವ್ಯಶ್ರೀ.ಎಸ್ 9.58 ಸಿಜಿಪಿಎ ಅಂಕಗಳೊಂದಿಗೆ ಏಳನೇ ರ್‍ಯಾಂಕ್ ಗಳಿಸಿಕೊಂಡಿದ್ದಾರೆ. ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗ ಮುಖ್ಯಸ್ಥ ಪ್ರೊ| ಶ್ರೀಕಾಂತ್ ರಾವ್ ಹಾಗೂ ಪ್ರಾಧ್ಯಾಪಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆಯನ್ನು ಮಾಡಿದ್ದಾರೆ.


ಜಾಗೃತಿ.ಜೆ.ನಾಯಕ್ ಅವರು ಪುತ್ತೂರಿನ ದರ್ಬೆಯ ಜ್ಯೋತಿ ನಾಯಕ್ ಹಾಗೂ ಜಗನ್ನಾಥ್ ನಾಯಕ್.ಎಂ ಅವರ ಪುತ್ರಿ. ದಿವ್ಯಶ್ರೀ.ಎಸ್ ಅವರು ಚಿಕ್ಕಪುತ್ತೂರಿನ ಪೊನ್ನಿ.ಎಸ್ ಹಾಗೂ ಎಸ್.ಶಿವಕುಮಾರ್ ಅವರ ಪುತ್ರಿ.

LEAVE A REPLY

Please enter your comment!
Please enter your name here