ವಿವೇಕಾನಂದ ಆ.ಮಾ ಶಾಲೆಯಲ್ಲಿ ಹಿ.ಪ್ರಾ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

0

ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಹದಿಹರೆಯದ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಒಂದು ದಿನದ ಕಾರ್ಯಾಗಾರ ಶಾಲಾ ಸಭಾಂಗಣದಲ್ಲಿ ಜು.21ರಂದು ನಡೆಯಿತು. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಈ ಕಾರ್ಯಾಗಾರ ನಡೆಯಿತು.

ಮಕ್ಕಳ ತಜ್ಞ ಡಾ.ಸಂದೀಪ್.ಎಚ್.ಎಸ್ ಮತ್ತು ಕಮ್ಯುನಿಟಿ ಮೆಡಿಸಿನ್ ತಜ್ಞೆ ಡಾ.ಅನನ್ಯ ಲಕ್ಷ್ಮೀ ಸಂದೀಪ್ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ. ಹದಿಹರೆಯದ ಸಮಸ್ಯೆಗಳು ಹಾಗೂ ಪರಿಹಾರಗಳ ಬಗ್ಗೆ ವಿವಿಧ ಚಟುವಟಿಕೆಗಳೊಂದಿಗೆ ನಡೆಸಲಾಯಿತು.

ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿ ಸದಸ್ಯೆ ಮಾಲಾ ಮಹೇಶ್ ಉಪಸ್ಥಿತರಿದ್ದರು. ಆಶಾ.ಕೆ ಮತ್ತು ಭಾರತಿ.ಎಸ್.ಎ ಪ್ರಾಸ್ತಾವಿಕ ನುಡಿಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಕವಿತಾ, ಶಾಂತಿ, ದೀಪ್ತಿ ಹಾಗೂ ಲತಾ ಕುಮಾರಿ ಕಾರ್ಯಕ್ರಮ ನಿರೂಪಿಸಿ, ಲಕ್ಷ್ಮೀ ಹಾಗೂ ರೇಖಾ ಆಚಾರ್ಯ ವಂದಿಸಿದರು. 

LEAVE A REPLY

Please enter your comment!
Please enter your name here