25 ನೇ ವಿಶ್ವ ಸ್ಕೌಟ್ ಜಾಂಬೂರಿ ದಕ್ಷಿಣ ಕೊರಿಯಾಕ್ಕೆ ತೆರಳುತ್ತಿರುವ ವೃಷಭ್ ಆರ್.ರೈಗೆ ಕುಂಬ್ರ ವರ್ತಕರ ಸಂಘದಿಂದ ಗೌರವಾರ್ಪಣೆ

0

ಪುತ್ತೂರು: ಆಗಸ್ಟ್ 1 ರಿಂದ 12 ರವರೆಗೆ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ವಿಶ್ವ ಸ್ಕೌಟ್ ಜಾಂಬೂರಿಯಲ್ಲಿ ನಾಯಕತ್ವ ಮತ್ತು ಜೀವನ ಕೌಶಲ್ಯಗಳನ್ನು ಸ್ಕೌಟಿಂಗ್ ಚಟುವಟಿಕೆಗಳಲ್ಲಿ ಭಾಗವಹಿಸಲು ತೆರಳುತ್ತಿರುವ ಕುಂಬ್ರ ವರ್ತಕರ ಸಂಘದ ಪ್ರಧಾನ ಕಾರ್ಯದರ್ಶಿ ಭವ್ಯ ರೈಯವರ ಪುತ್ರ, ಪುತ್ತೂರು ಸುದಾನ ಶಾಲೆಯ ವಿದ್ಯಾರ್ಥಿ ವೃಷಭ್ ಆರ್.ರೈಯವರಿಗೆ ಕುಂಬ್ರ ವರ್ತಕರ ಸಂಘದಿಂದ ಜು.29 ರಂದು ಗೌರವಾರ್ಪಣೆ ಮಾಡಲಾಯಿತು.

ಕುಂಬ್ರದ ನ್ಯೂ ಫ್ಯಾಮಿಲಿ ಕಾಂಪ್ಲೆಕ್ಸ್ನಲ್ಲಿರುವ ವರ್ತಕರ ಸಂಘದ ಕಚೇರಿಯಲ್ಲಿ ವೃಷಬ್ ಆರ್.ರೈಯವರಿಗೆ ಶಾಲು ಹೊದಿಸಿ ಗುಲಾಬಿ ಹೂ ನೀಡಿ ಗೌರವಿಸಿ, ವರ್ತಕರ ಸಂಘದ ಪದಾಧಿಕಾರಿಯವರ ಪುತ್ರನೋರ್ವನು ದಕ್ಷಿಣ ಕೊರಿಯಾಕ್ಕೆ ವಿಶ್ವ ಸ್ಕೌಟ್ ಜಾಂಬೂರಿಯಲ್ಲಿ ಭಾಗಹಿಸಲು ತೆರಳುತ್ತಿರುವುದು ಹೆಮ್ಮೆಯ ಸಂಗತಿ ವೃಷಭ್ ರೈಯವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯ, ಪರ್ಪುಂಜ ರಾಜ್ ಕಾಂಪ್ಲೆಕ್ಸ್ ಮಾಲಕ ಪ್ರೇಮ್‌ರಾಜ್ ರೈ, ವರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮ್‌ಸುಂದರ ರೈ ಕೊಪ್ಪಳ, ಮಾಜಿ ಅಧ್ಯಕ್ಷರುಗಳಾದ ಎಸ್.ಮಾಧವ ರೈ ಕುಂಬ್ರ, ದಿವಾಕರ ಶೆಟ್ಟಿ, ಮೆಲ್ವಿನ್ ಮೊಂತೆರೋ ಹಾಗೂ ಪದಾಧಿಕಾರಿಗಳಾದ ರೇಷ್ಮಾ, ರಮ್ಯಶ್ರೀ, ಅಶ್ರಫ್, ಹನೀಫ್, ರಾಜೇಶ್ ರೈ ಪರ್ಪುಂಜ, ಸಂಶುದ್ದೀನ್ ಎ.ಆರ್, ಹನೀಫ್, ವಿಶ್ವನಾಥ ರೈ, ರಮೇಶ್ ಆಳ್ವ ಕಲ್ಲಡ್ಕ, ಪುರಂದರ ರೈ ಕೋರಿಕ್ಕಾರು, ಪದ್ಮನಾಭ ಆಚಾರ್ಯ, ಚರಿತ್ ಕುಮಾರ್, ಉದಯ ಆಚಾರ್ಯ ಕೃಷ್ಣನಗರ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here