ಸುಬ್ರಹ್ಮಣ್ಯ : ಮನೆಗೆ ನುಗ್ಗಿ ಚಿನ್ನ,ಬೆಳ್ಳಿ,ನಗದು ಕಳ್ಳತನ

0

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನವನ್ನು ಕಳವು ಗೈದ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದು ಆದಿತ್ಯವಾರ ಸಂಜೆ ಮನೆಗೆ ವಾಪಾಸ್ಸಾದಾಗ ಚಿನ್ನ, ಬೆಳ್ಳಿ, ನಗದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ಸು, ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here