ಅಜ್ಜಿಕಲ್ಲು:ಕೀರ್ತಿ ನೂತನ ಸ್ವಸಹಾಯ ಸಂಘ ಉದ್ಘಾಟನೆ

0

ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ಮಾರ್ಗದರ್ಶನದಲ್ಲಿ ಬೆಟ್ಟoಪಾಡಿ ವಲಯದ ಅಜ್ಜಿಕಲ್ಲು ಕಾರ್ಯಕ್ಷೇತ್ರದಲ್ಲಿ ಕೀರ್ತಿ ಎಂಬ ಹೆಸರಿನ ನೂತನ ಸ್ವಸಹಾಯ ಸಂಘವನ್ನು ಜು.31 ರಂದು ಉದ್ಘಾಟಿಸಲಾಯಿತು. ಕೈಕಾರ ಸರಕಾರಿ ಹಿರಿಯ ಪ್ರಾಥಮಿಕ  ಶಾಲೆಯ  ಮುಖ್ಯಗುರು  ರಾಮಣ್ಣ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿ ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯೆ ರೇಖಾ ಯತೀಶ್  ನೂತನ ಸಂಘಕ್ಕೆ ಶುಭ ಹಾರೈಸಿದರು. ಅಜ್ಜಿಕಲ್ಲು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ತ್ರಿವೇಣಿ ಸ್ವಾಗತಿಸಿ ವಂದಿಸಿದರು. ಬೆಟ್ಟoಪಾಡಿ ವಲಯ ಮೇಲ್ವಿಚಾರಕ ಚಂದ್ರಶೇಖರ್ ಸಂಘದ ನಿಯಮಾವಳಿ ಬಗ್ಗೆ ಮಾಹಿತಿ ನೀಡಿದರು. ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here