ಗೋಳಿತ್ತೊಟ್ಟು ಹಾಲು ಉ.ಸ.ಸಂಘ

0

ಅಧ್ಯಕ್ಷ: ಕೊರಗಪ್ಪ ಗೌಡ, ಉಪಾಧ್ಯಕ್ಷ: ಜನಾರ್ದನ ಗೌಡ

ನೆಲ್ಯಾಡಿ: ಗೋಳಿತ್ತೊಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕೊರಗಪ್ಪ ಗೌಡ ಕಲ್ಲಡ್ಕ ಹಾಗೂ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಪಟೇರಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಜು.29 ರಂದು ಸಂಘದ ಕಚೇರಿಯಲ್ಲಿ ನಡೆದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಿತು. ನಿರ್ದೇಶಕರಾದ ನೋಣಯ್ಯ ಪೂಜಾರಿ ಅಂಬರ್ಜೆ, ಹೇಮಲತಾ ತಿರ್ಲೆ, ಕೆ.ಕುಶಾಲಪ್ಪ ಗೌಡ ಕೊಂಬ್ಯಾನ, ರಮೇಶ ಕೆ.ಬಿ.ಕೊಂಕೋಡಿ, ಶಶಿಧರ ಪಠೇರಿ, ಪಿ.ಕುಶಾಲಪ್ಪ ಗೌಡ ಅನಿಲ, ವಿಶ್ವನಾಥ ಮೂಲ್ಯ ನೆಕ್ಕರೆ, ಮೀನಾಕ್ಷಿ ಆಲಂತಾಯ, ಹರೀಶ ನಾಯ್ಕ್ ತಿರ್ಲೆ, ಭಾರತಿ ಪುಳಿತ್ತಡಿ, ರಾಜೀವಿ ಬೊಟ್ಟಿಮಜಲು ಉಪಸ್ಥಿತರಿದ್ದರು. ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟಾಧಿಕಾರಿ ಶೋಭಾ ಎನ್.ಎಸ್.ರವರು ಚುನಾವಣಾಧಿಕಾರಿಯಾಗಿದ್ದರು. ಸಂಘದ ಕಾರ್ಯದರ್ಶಿ ಪದ್ಮನಾಭ ಭಟ್, ಹಾಲು ಪರೀಕ್ಷಕ ಧನಂಜಯ ಅಲೆಕ್ಕಿ ಸಹಕರಿಸಿದರು.

ಸಂಘದ ಅಧ್ಯಕ್ಷರಾಗಿ ಕೊರಗಪ್ಪ ಗೌಡ ಅವರು ಸತತ 3ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದರು. ಗೋಳಿತ್ತೊಟ್ಟು ಗ್ರಾ.ಪಂ.ನ ಅಧ್ಯಕ್ಷರೂ ಆಗಿರುವ ಜನಾರ್ದನ ಗೌಡ ಪಠೇರಿಯವರೂ ಸಹ 3ನೇ ಬಾರಿಗೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here