ಅನಾರೋಗ್ಯದಿಂದುರುವ ಮಹಿಳೆಗೆ ಎವಿಜಿ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್‌ನಿಂದ ಆರ್ಥಿಕ ನೆರವು

0

ಪುತ್ತೂರು: ಅನಾರೋಗ್ಯದಿಂದ ನೊಂದಿರುವ ಮಹಿಳೆಗೆ ಎವಿಜಿ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನಿಂದ ಆರ್ಥಿಕ ನೆರವು ನೀಡಲಾಗಿದೆ.
ಬನ್ನೂರು ಗ್ರಾಮದ ನೆಕ್ಕಿಲ ನಿವಾಸಿ ಅವಿವಾಹಿತೆ ಕಮಲ ಎಂಬವರು ತಮ್ಮನಾದ ಬಾಲಕೃಷ್ಣ ಎಂಬವರ ಜೊತೆಯಲ್ಲಿದ್ದು ಜೀವನ ಸಾಗಿಸುತ್ತಿದ್ದಾರೆ. ಇದೀಗ ಅವರ ತಮ್ಮ ಬಾಲಕೃಷ್ಣರವರು ಅನಾರೋಗ್ಯ ಪೀಡಿತರಾಗಿದ್ದಾರೆ. ವಿದ್ಯಾಭ್ಯಾಸ ಮಾಡುತ್ತಿರುವ ಇಬ್ಬರು ಮಕ್ಕಳು ಇದ್ದಾರೆ ಇದೀಗ ಕಮಲ ಕೂಡ ಅನಾರೋಗ್ಯದಿಂದಿರುವುದರಿಂದ ಅವರಿಗೆ ಎವಿಜಿ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟಿನಿಂದ ಕಿಂಚಿತ್ ಅರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ಸಂಚಾಲಕ ಎ.ವಿ.ನಾರಾಯಣ್, ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ, ಉಪಾಧ್ಯಕ್ಷ ಉಮೇಶ್ ಮಳವೇಲು, ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗುಡ್ಡಪ್ಪ ಗೌಡ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here