ಪಾಣೆಮಂಗಳೂರು ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನಿವೃತ್ತ ಅಡುಗೆ ಸಿಬ್ಬಂದಿಗೆ ಸನ್ಮಾನ

0

ವಿಟ್ಲ: ಪಾಣೆಮಂಗಳೂರು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 32 ವರ್ಷಗಳ ಕಾಲ ಅಡುಗೆ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಕೆ. ಸುಶೀಲ ರವರನ್ನು ಸನ್ಮಾನಿಸಲಾಯಿತು.


ಪಾಣೆಮಂಗಳೂರು ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಭವ್ಯ ಪಿ. ರವರು ಸನ್ಮಾನಿತರ ಬಗ್ಗೆ ಮಾತನಾಡಿದರು. ರುಕ್ಮಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ವರ್ಷಿಣಿ ಸ್ವಾಗತಿಸಿ, ಖುಷಿ ವೈ ವಂದಿಸಿದರು. ಮೊಡಂಕಾಪು ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ಸನ್ಮಾನ ಪತ್ರ ವಾಚಿಸಿದರು.

LEAVE A REPLY

Please enter your comment!
Please enter your name here