ಮಮತಾ ಅಂಬರಾಜೆಯವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ

0

ಆಲಂಕಾರು: ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಆಲಂಕಾರು ಇದರ ಉಪಾಧ್ಯಕ್ಷೆ ಮಮತಾ ಅಂಬರಾಜೆಯವರಿಗೆ ಜೇಸಿಐ ವಲಯ-15 ನೀಡುವ ಪ್ರತಿಷ್ಠಿತ ಸಮಾಜ ಸೇವಾರತ್ನ ಪ್ರಶಸ್ತಿ ಲಭಿಸಿದೆ.


ಜೇಸಿಐ ಶಂಕರನಾರಾಯಣ ಘಟಕದ ಆಶ್ರಯದಲ್ಲಿ ಹಾಲಾಡಿಯ ಶಾಲಿನಿ ಜಿ.ಶಂಕರ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿಯವರು ಪ್ರಶಸ್ತಿ ವಿತರಿಸಿದರು. ಪೆರಾಬೆ ಗ್ರಾ.ಪಂ.ಸದಸ್ಯೆಯಾಗಿರುವ ಮಮತಾ ಅಂಬರಾಜೆಯವರು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳು, ಶಿಶುಮಂದಿರ, ಸರ್ಕಾರಿ ಶಾಲೆ ಸೇರಿದಂತೆ ಹಲವು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷ ಅಜಿತ್‌ಕುಮಾರ್ ರೈ, ವಲಯ ತರಬೇತಿ ವಿಭಾಗದ ನಿರ್ದೇಶಕ ಪ್ರದೀಪ್ ಬಾಕಿಲ, ಆಲಂಕಾರು ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ ಅಲೆಪ್ಪಾಡಿ, ಕಮಲಾಕ್ಷ ಶೆಟ್ಟಿ ಅಂಬರಾಜೆ, ಲೇಡಿ ಜೇಸಿ ಅಧ್ಯಕ್ಷೆ ಜಯಶ್ರೀ ಅಲೆಪ್ಪಾಡಿ, ಜೂನಿಯರ್ ಜೇಸಿಗಳಾದ ಜಶುನ್, ನಿಹಾಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here