ಕಾಣಿಯೂರು: 1700ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ

0

ಕುಟುಂಬವನ್ನು ಬೆಳಗಿಸುವ ಮದ್ಯವರ್ಜನ ಶಿಬಿರ ಸಮಾಜಕ್ಕೆ ಮಾದರಿ- ಜಯಸೂರ್ಯ ರೈ ಮಾದೋಡಿ

ಕುಟುಂಬದ ಕಣ್ಣೀರೊರೆಸುವ ಪುಣ್ಯದ ಕಾರ್ಯವು ಶಿಬಿರದ ಮೂಲಕ ಆಗುತ್ತಿದೆ- ಮಹೇಶ್. ಕೆ ಸವಣೂರು
ಕುಟುಂಬಕ್ಕೆ ಆಸರೆಯಾಗಿ ನಿಲ್ಲುವ ಕೆಲಸ ಧರ್ಮಸ್ಥಳ ಯೋಜನೆಯ ಮುಖಾಂತರ ಆಗುತ್ತಿದೆ- ಪ್ರವೀಣ್ ಕುಮಾರ್
ಅದೆಷ್ಟೋ ಕುಟುಂಬಗಳು ಸಂತೃಪ್ತ ಜೀವನ ನಡೆಸುತ್ತಿದೆ- ಗಣೇಶ್ ಆಚಾರ್ಯ
ಮಕ್ಕಳಿಗೂ ಸಂಸ್ಕಾರ ಕೊಡುವಂತಹ ಕಾರ್ಯಕ್ರಮಗಳು ನಡೆಯಬೇಕು- ಲಕ್ಷ್ಮಣ ಕರಂದ್ಲಾಜೆ
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿರುವ ಯೋಜನೆಯ ಕಾರ್ಯ ಶ್ಲಾಘನೀಯ- ದಿನೇಶ್ ಮೆದು
ಬಾಳಿಗೆ ಬೆಳಕು ನೀಡಿ ಕುಟುಂಬವನ್ನು ಬೆಳಗಿಸುವ ಕಾರ್ಯ ಶಿಬಿರದಿಂದ ಆಗುತ್ತಿದೆ- ಸುರೇಶ್ ರೈ ಸೂಡಿಮುಳ್ಳು
ಸಮಾಜದ ವ್ಯಕ್ತಿಯ ಉನ್ನತ್ತಿಗಾಗಿ ಶ್ರಮಿಸಬೇಕು- ಚಿದಾನಂದ ಉಪಾಧ್ಯಾಯ ಕಲ್ಪಡ
ವ್ಯಸನ ಮುಕ್ತರಾಗಿ ನೆಮ್ಮದಿಯ ಜೀವನ ನಡೆಸಬೇಕು- ಪದ್ಮಯ್ಯ ಗೌಡ ಅನಿಲ
ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ಸಂಘಟನೆಯಾಗಿದೆ- ಉದಯ ರೈ ಮಾದೋಡಿ
ಜನ ಮದ್ಯವ್ಯಸನ ಮುಕ್ತರಾಗುವಲ್ಲಿ ಯೋಜನೆಯ ಕಾರ್ಯ ಶ್ಲಾಘನೀಯ- ಸೀತಾರಾಮ ಗೌಡ ಪೊಸವಳಿಕೆ

ಕಾಣಿಯೂರು: ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡಿ ಇಡೀ ಕುಟುಂಬವನ್ನು ಬೆಳಗಿಸಿದ ಮದ್ಯವರ್ಜನ ಶಿಬಿರ ಸಮಾಜಕ್ಕೆ ಮಾದರಿ ಮತ್ತು ಆದರ್ಶಪ್ರಾಯವಾಗಿದೆ. ಒಬ್ಬ ವ್ಯಕ್ತಿಯನ್ನು ಪರಿವರ್ತನೆ ಮಾಡಿ ಸಂಸ್ಕಾರ ಕೊಡುವ ಕಾರ್ಯ ಶ್ರೇಷ್ಠ ಮತ್ತು ಪುಣ್ಯದ ಕಾರ್ಯ. ಪ್ರಸ್ತುತ ದಿನಗಳಲ್ಲಿ ದುಶ್ಚಟಗಳ ಹಾವಳಿಯಿಂದ ಸಮಾಜದ ಸ್ವಾಸ್ಥ್ಯ ಕೆಡುವಂತಹ ಸಂದರ್ಭದಲ್ಲಿ ಇಂತಹ ಶಿಬಿರಗಳು ಸಮಾಜಕ್ಕೆ ಮಾದರಿ ಎಂದು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಹೇಳಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ತಾಲೂಕು ಜನಜಾಗೃತಿ ವೇದಿಕೆ ಕಡಬ, ಮದ್ಯವರ್ಜನಾ ಶಿಬಿರ ವ್ಯವಸ್ಥಾಪನಾ ಸಮಿತಿ ಕಾಣಿಯೂರು, ಗ್ರಾಮ ಪಂಚಾಯತ್ ಕಾಣಿಯೂರು, ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಕಾಣಿಯೂರು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಸವಣೂರು ವಲಯ, ನವಜೀವನ ಸಮಿತಿ ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಆ. 1ರಂದು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಜರಗುವ 1700ನೇ ಮದ್ಯಮರ್ಜನಾ ಶಿಬಿರವನ್ನು ಅವರು ಉದ್ಘಾಟಿಸಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ, ನ್ಯಾಯವಾದಿ ಮಹೇಶ್ ಕೆ. ಸವಣೂರು, ಮದ್ಯವರ್ಜನ ಶಿಬಿರದ ಮೂಲಕ ಮಹಿಳೆಯರ ಮತ್ತು ಕುಟುಂಬದ ಕಣ್ಣೀರೊರೆಸುವ ಪುಣ್ಯದ ಕಾರ್ಯದಿಂದ ಕುಟುಂಬ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ದುಶ್ಚಟಗಳಿಂದ ದೂರವಿದ್ದು ಬದುಕಿದಾಗ ಸಮಾಜ ನಮ್ಮನ್ನು ಗೌರವಿಸುತ್ತದೆ ಹಾಗೂ ಸಾಂಸಾರಿಕವಾಗಿಯೂ ನೆಮ್ಮದಿ, ಶಾಂತಿ ದೊರಕಲು ಸಾಧ್ಯವಾಗುತ್ತದೆ ಎಂದರು.


ಶ್ರೀ.ಕ್ಷೇ.ಧ.ಗ್ರಾ.ಯೋಜನೆ.ಬಿ.ಸಿ ಟ್ರಸ್ಟ್‌ನ ದ.ಕ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಮಾತನಾಡಿ, ಕುಡಿತದ ದುಶ್ಚಟಕ್ಕೆ ಒಳಗಾಗಿರುವ ವ್ಯಕ್ತಿಗಳ ಮನಪರಿವರ್ತನೆಗಾಗಿ ಮದ್ಯವರ್ಜನ ಶಿಬಿರಗಳನ್ನು ಆಯೋಜನೆ ಮಾಡಿ, ಆ ಮೂಲಕ ಸಾವಿರಾರು ಜನರನ್ನು ವ್ಯಸನ ಮುಕ್ತರನ್ನಾಗಿ ಮಾಡುವ ಮೂಲಕ ಆ ಕುಟುಂಬಕ್ಕೆ ಆಸರೆಯಾಗಿ ನಿಲ್ಲುವ ಕೆಲಸ ಧರ್ಮಸ್ಥಳ ಯೋಜನೆಯ ಮುಖಾಂತರ ಆಗುತ್ತಿದೆ ಎಂದರು.


ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ ಮಾತನಾಡಿ, ಮದ್ಯವರ್ಜನ ಶಿಬಿರದ ಜೊತೆಗೆ ಮಕ್ಕಳಿಗೂ ಸಂಸ್ಕಾರ ಕೊಡುವಂತಹ ಕಾರ್ಯಕ್ರಮಗಳು ನಡೆಯಬೇಕು. ಆ ಮೂಲಕ ಉತ್ತಮ ಸಮಾಜವಾಗಿ ಮೂಡಿಬರಬೇಕು ಎಂದರು.


ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಮಾತನಾಡಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿರುವ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯ ಶ್ಲಾಘನೀಯ. ಕುಡಿತದ ಚಟದಿಂದ ಅದೆಷ್ಟೋ ಗ್ರಾಮೀಣ ಭಾಗದ ಕುಟುಂಬಗಳು ನಾಶವಾಗುತ್ತಿದೆ. ಇದನ್ನು ಮನಗಂಡು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಮೂಲಕ ಸರಿಪಡಿಸುವ ಉzಶವನ್ನು ಇಟ್ಟುಕೊಂಡು ಇಂತಹ ಶಿಬಿರವನ್ನು ಆಯೋಜಿಸಿರುವುದು ಹೆಮ್ಮೆಯ ವಿಚಾರ ಎಂದರು.


ದ.ಕ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಮಾತನಾಡಿ, ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜದಲ್ಲಿ ಹಲವಾರು ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಬಾಳಿಗೆ ಬೆಳಕು ನೀಡಿ ಇಡೀ ಕುಟುಂಬವನ್ನು ಬೆಳಗಿಸುವ ಕಾರ್ಯ ಮದ್ಯವರ್ಜನ ಶಿಬಿರದಿಂದ ಆಗುತ್ತಿದೆ ಎಂದರು.


ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ ಮಾತನಾಡಿ, ಸಮಾಜದಲ್ಲಿ ಸಾಮಾಜಿಕ ಪಿಡುಗೇ ಎದ್ದು ಕಾಣುತ್ತಿದೆ. ಮದುವೆ ಕಾರ್ಯಕ್ರಮದ ಬಳಿಕ ಡಿನ್ನರ್ ಕಾರ್ಯಕ್ರಮ ಮಾಡುವುದನ್ನು ನಿಲ್ಲಿಸಬೇಕು. ಎಲ್ಲಾ ಪರಿವಾರ ಸಂಘಟನೆಯವರು ಇದನ್ನು ವಿರೋಧಿಸಿ ಒಬ್ಬ ಸಮಾಜದ ವ್ಯಕ್ತಿಯ ಉನ್ನತಿಗಾಗಿ ಶ್ರಮಿಸಬೇಕು ಎಂದರು.


ಕಾಣಿಯೂರು ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕೆಲವು ವರ್ಷಗಳ ಹಿಂದೆ ಕಾಣಿಯೂರಿನಲ್ಲಿ ಮದ್ಯವರ್ಜನ ಶಿಬಿರವು ಯಶಸ್ವಿಯಾಗಿ ನಡೆದಿತ್ತು. ಶಿಬಿರದ ಪ್ರಯೋಜನ ಪಡೆದು ಶಿಬಿರಾರ್ಥಿಗಳು ವ್ಯಸನ ಮುಕ್ತರಾಗಿ ನೆಮ್ಮದಿಯ ಜೀವನ ನಡೆಸಬೇಕು ಎಂದರು.


ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಉದಯ ರೈ ಮಾದೋಡಿ ಮಾತನಾಡಿ, ಮದ್ಯವ್ಯಸನದಿಂದ ಮುಕ್ತವಾಗಿ ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿ ರೂಪುಗೊಳ್ಳಲಿ. ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ಸಂಘಟನೆಯಾಗಿದೆ. ಶಿಬಿರಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದು, ನೆಮ್ಮದಿಯ ಬದುಕನ್ನು ನಡೆಸುವಂತಾಗಬೇಕು ಎಂದರು.
ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಸೀತಾರಾಮ ಗೌಡ ಪೊಸವೊಳಿಕೆ ಮಾತನಾಡಿ, ಮದ್ಯವ್ಯಸನದಿಂದ ಜನ ಮುಕ್ತರಾಗುವಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಶ್ಲಾಘನೀಯ. ಬಾಳಿಗೆ ಬೆಳಕು ನೀಡಿ ಇಡೀ ಕುಟುಂಬವನ್ನು ಬೆಳಗಿಸುವ ಕಾರ್ಯ ಮದ್ಯವರ್ಜನ ಶಿಬಿರದಿಂದ ಆಗುತ್ತಿರುವುದು ಸಂತೋಷದ ವಿಚಾರ ಎಂದರು.


ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸು, ಕಡಬ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸಂತೋಷ್, ಯೋಜನೆಯ ಸವಣೂರು ವಲಯಾಧ್ಯಕ್ಷ ರಾಮಚಂದ್ರ ಇಡ್ಯಡ್ಕ, ಯೋಜನೆಯ ಕಾಣಿಯೂರು ಒಕ್ಕೂಟದ ಅಧ್ಯಕ್ಷ ಕುಸುಮಾಧರ ಗೌಡ ಅನಿಲ, ಶಿಬಿರಾಧಿಕಾರಿ ದೇವಿಪ್ರಸಾದ್, ಸವಣೂರು ವಲಯ ಮೇಲ್ವಿಚಾರಕಿ ಹರ್ಷಕುಮಾರಿ ಉಪಸ್ಥಿತರಿದ್ದರು. ವೇಣುಗೋಪಾಲ ಕಳುವಾಜೆ, ಸುರೇಶ್ ಓಡಬಾಯಿ, ಶುಭಾ ಆರ್ ನೋಂಡ, ಹೊನ್ನಪ್ಪ ಗೌಡ ಸವಣೂರು, ಗಣೇಶ್ ಉದನಡ್ಕ, ವಸಂತ ರೈ ಕಾರ್ಕಳ, ಪರಮೇಶ್ವರ ಅನಿಲ, ನಾಗೇಶ್ ರೈ ಮಾಳ, ಚಂದ್ರಶೇಖರ್ ಬರೆಪ್ಪಾಡಿ, ರಾಜೇಶ್ ಮೀಜೆ, ಅಶೋಕ್ ಗೌಡ ಪಿ, ಮೋಹನ್ ಅಗಳಿ, ಜಗದೀಶ್ ಇಡ್ಯಾಡಿ, ಭರತ್ ಬಾರೆತ್ತಡಿ, ಹೊನ್ನಪ್ಪ ಕೂರೇಲು, ಸುಬ್ರಹ್ಮಣ್ಯ ದೋಳ್ಪಾಡಿ ಅತಿಥಿಗಳಿಗೆ ಶಾಲು, ಹೂ ನೀಡಿ ಗೌರವಿಸಿದರು. ರವಿಶಂಕರ್ ಎನ್.ಟಿ ನಾವೂರು ಪ್ರಾರ್ಥಿಸಿದರು. ಉಡುಪಿ ಪ್ರಾದೇಶಿಕ ಕಚೇರಿಯ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕ ಮಾತನಾಡಿದರು. ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು ಸ್ವಾಗತಿಸಿ, ಜತೆ ಕಾರ್ಯದರ್ಶಿ ಜಯಂತ ಅಬೀರ ವಂದಿಸಿದರು. ಮೇಲ್ವೀಚಾರಕ ರವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಅದೆಷ್ಟೋ ಕುಟುಂಬಗಳು ಸಂತೃಪ್ತ ಜೀವನ ನಡೆಸುತ್ತಿದೆ- ಗಣೇಶ್ ಆಚಾರ್ಯ
ಉಡುಪಿ ಪ್ರಾದೇಶಿಕ ಕಚೇರಿಯ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬೆಳ್ತಂಗಡಿ ತಾಲೂಕಿನಲ್ಲಿ ಆರಂಭಗೊಂಡ ಮದ್ಯವರ್ಜನ ಶಿಬಿರವು ಇಂದು ರಾಜ್ಯಾದ್ಯಂತ ಮದ್ಯವರ್ಜನ ಶಿಬಿರವನ್ನು ಯಶಸ್ವಿಯಾಗಿ ನಡೆಸಿ ಅದೆಷ್ಟೋ ಕುಟುಂಬಗಳು ಸಂತೃಪ್ತ ಜೀವನ ನಡೆಸುತ್ತಿವೆ. ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀಯವರ ಆಶಯದೊಂದಿಗೆ ಮದ್ಯವರ್ಜನ ಶಿಬಿರಗಳು ಯಶಸ್ವಿಯಾಗಿ ನಡೆಯುತ್ತಿದೆ. ಕುಡಿತದಂತಹ ದುಶ್ಚಟಕ್ಕೆ ದಾಸರಾಗಿರುವ ವ್ಯಕ್ತಿಗಳ ಮನ ಪರಿವರ್ತನೆ ಮಾಡಿ ಅವರನ್ನು ಸಮಾಜದಲ್ಲಿ ಗೌರವಯುತವಾದ ಬದುಕು ನಡೆಸಲು ಸಹಕಾರಿಯಾಗಬೇಕೆನ್ನುವುದು ಧರ್ಮಸ್ಥಳ ಸಂಸ್ಥೆಯ ಮದ್ಯವರ್ಜನ ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದರು.

LEAVE A REPLY

Please enter your comment!
Please enter your name here