ಚೆಸ್: ವಿವೇಕಾನಂದ ಆ ಮಾ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಸಾಕ್ಷರತಾ  ಹಾಗೂ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಕಾರಿ ಪ್ರೌಢಶಾಲೆ ನೆಟ್ಟಣಿಗೆ ಮೂಡ್ನೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ತ್ರಿಶೂಲ್ ಎನ್.ಡಿ ( ನಂದಿಲ ದಾಮೋದರ್ ಮತ್ತು ಶಿಕ್ಷಕಿ ಶ್ರೀಮತಿ ನವೀನ ದಂಪತಿಗಳ ಪುತ್ರ) ಮತ್ತು ಸುಶ್ಮಿತಾ ರಾವ್ (ತ್ರಿವಿಕ್ರಮ ರಾವ್ ಮತ್ತು ಶಾರದಾ ದಂಪತಿಗಳ ಪುತ್ರಿ) ವಿಜೇತರಾಗಿದ್ದು, ಆಗಸ್ಟ್ 3(ಇಂದು) ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here