ಪ್ರಿಯದರ್ಶಿನಿಯಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಪ್ರಿಯದರ್ಶಿನಿ ವಿದ್ಯಾಸಂಸ್ಥೆ ಬೆಟ್ಟಂಪಾಡಿಯಲ್ಲಿ ವಿದ್ಯಾಭಾರತಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ವಿಜಯಲಕ್ಷ್ಮಿ ಸಂತೋಷ್ ಕುದ್ರೆಡ್ಕ ಅಜ್ಜಿಕಲ್ಲು ನೆರವೇರಿಸಿದರು. ಸಂಸ್ಥೆಯ ಸಂಚಾಲಕ ಡಾ. ಸತೀಶ್ ರಾವ್, ಸದಸ್ಯರಾದ ಪ್ರಕಾಶ್ ರೈ ಬೈಲಾಡಿ, ಶ್ರೀನಿವಾಸ ಭಟ್ ದೇವಸ್ಯ, ಪೋಷಕರಾದ ಶಿವಕುಮಾರ್ ಬಲ್ಲಾಳ್ ಬೆಟ್ಟಂಪಾಡಿ ಬೀಡು, ಡಾ. ಪ್ರಮೋದ್ ಎಂ. ಜಿ, ನವೋದಯ ಪ್ರೌಢಶಾಲೆಯ ಶಿಕ್ಷಕ ಶೋಭಾ, ಉದ್ಯಮಿ ಸತೀಶ್ ರೈ ಕಟ್ಟಾವು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಗುರುಗಳಾದ ರಾಜೇಶ್ ಎನ್ ಇವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

LEAVE A REPLY

Please enter your comment!
Please enter your name here