ಕುಂಬ್ರ: ಪ್ರಾಂಶುಪಾಲರಿಗೆ ಗೌರವ ಸಮರ್ಪಣಾ ಕಾರ್ಯಕ್ರಮ

0

ಪುತ್ತೂರು: ಕರ್ತವ್ಯದಿಂದ ನಿವೃತ್ತಿ ಹೊಂದಿದ ಕುಂಬ್ರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಉಪಾಧ್ಯಾಯರವರಿಗೆ ಕಾಲೇಜು ವತಿಯಿಂದ ಗೌರವ ಸಮರ್ಪಣಾ ಕಾರ್ಯಕ್ರಮ ಜು.31 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶರ್ಮಿಳಾ ಗ್ಲಾಡೀಸ್‌ರವರು ವಹಿಸಿದ್ದರು. ಕಾಲೇಜು ವಿಭಾಗ, ಪ್ರೌಢ ಶಾಲಾ ಮತ್ತು ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕಿಯರು, ವಿದ್ಯಾರ್ಥಿಗಳು ಅಭಿನಂದನಾ ಮಾತುಗಳನ್ನಾಡಿದರು. ದಿವ್ಯ ಆಳ್ವ ಅಭಿನಂದನಾ ಪತ್ರ ವಾಚಿಸಿದರು. ಪ್ರೌಢ ಶಾಲಾ ಮತ್ತು ಪ್ರಾಥಮಿಕ ಶಾಲಾ ವಿಭಾಗದಿಂದ ಪ್ರಾಂಶುಪಾಲರಿಗೆ ಗೌರವದ ಸನ್ಮಾನ ಮಾಡಲಾಯಿತು. ಗೌರವ ಸ್ವೀಕರಿಸಿದ ಗೋಪಾಲಕೃಷ್ಣ ಉಪಾಧ್ಯಾಯವರು ಕೃತಜ್ಞತಾ ಮಾತುಗಳನ್ನಾಡಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ನಾವು ಯಾರಿಗೂ ತಲೆ ಬಾಗುವ ಅಗತ್ಯವಿಲ್ಲ ಎಂದು ಹೇಳಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಪ್ರೌಢ ಶಾಲಾ ಮುಖ್ಯಶಿಕ್ಷಕಿ ಮಮತಾ, ಪ್ರಾಥಮಿಕ ಶಾಲಾ ಶಿಕ್ಷಕಿ ಶೀಲಾವತಿ, ಅನುಪಮ ಗೋಪಾಲಕೃಷ್ಣ ಉಪಾಧ್ಯಾಯ ಉಪಸ್ಥಿತರಿದ್ದರು. ಸೌಮ್ಯ ಸ್ವಾಗತಿಸಿ, ಬೇಬಿ ವಂದಿಸಿದರು. ದಿವ್ಯ ಕಾರ್ಯಕ್ರಮ ನಿರೂಪಿಸಿದರು.
ಚಿತ್ರ: ಕೆಪಿಎಸ್ ಕುಂಬ್ರ

LEAVE A REPLY

Please enter your comment!
Please enter your name here