ಪುತ್ತೂರು ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ಸನ್ಮಾನ ಕಾರ್ಯಕ್ರಮ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿಗೆ ಆಯ್ಕೆ

0

ಪುತ್ತೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಪುತ್ತೂರು ಇದರ ಮಹಾಸಭೆಯು ಕ್ಷೇತ್ರ ಸಮಿತಿಯ ಅಧ್ಯಕ್ಷ ಜಯರಾಮ ಬಿ ಎನ್ ಅಧ್ಯಕ್ಷತೆಯಲ್ಲಿ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಹಿರಿಯ ವೃತ್ತಿ ಬಾಂಧವ ಸವಣೂರು ವಲಯದ ಮಾಜಿ ಅಧ್ಯಕ್ಷ ವೆಂಕಪ್ಪ ಗೌಡ ಹಾಗೂ ಉಪ್ಪಿನಂಗಡಿ ವಲಯದ ಹಾಲಿ ಅಧ್ಯಕ್ಷ ಕೃಷ್ಣ ನಾಯಕ್‌ರವರನ್ನು ಕ್ಷೇತ್ರ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಐವರು ಕ್ಷೇತ್ರ ಸಮಿತಿ ಸದಸ್ಯರುಗಳಾದ ಜಯರಾಮ ಬಿ ಎನ್, ರಘುನಾಥ ಬಿ, ಜಯಂತ ಕೆ, ಶಂಭು ಬಲ್ಯಾಯ ಮುಂಡೋಡಿ, ಸುರೇಖಾ ನಿಡ್ಪಳ್ಳಿರವರನ್ನು ದಕ್ಷಿಣ ಕನ್ನಡ ಜಿಲ್ಲಾ ಸಮಿತಿಗೆ 2 ವರ್ಷದ ಅವಧಿಗೆ ಆಯ್ಕೆ ಮಾಡಲಾಯಿತು.


ರಾಜ್ಯ ಸಮಿತಿಯ ಅಧ್ಯಕ್ಷ ಬಿ ಎ ನಾರಾಯಣ, ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕುಮಾರ್, ಜಿಲ್ಲಾ ಸಮಿತಿ ಕಾರ್ಯದರ್ಶಿ ಲಿಗೋದರ್, ಕೋಶಾಧಿಕಾರಿ ಈಶ್ವರ ಕುಲಾಲ್ ಉಪಸ್ಥಿತರಿದ್ದರು.


ಸನ್ಮಾನ:
ಟೈಲರ್ ಎಸೋಸಿಯೇಶನ್ ಕ್ಷೇತ್ರ ಸಮಿತಿ ಪುತ್ತೂರು ಇದರ ವತಿಯಿಂದ ಸಮಿತಿಗೆ ಪ್ರೋತ್ಸಾಹ ನೀಡುತ್ತಿರುವ ಪುತ್ತೂರು ಏಳ್ಮುಡಿ ದೇವ ಟ್ರೇಡರ್‍ಸ್‌ನ ಮಾಲಕರಾದ ಟಿ.ವಿ ರವೀಂದ್ರನ್ ಹಾಗೂ ಕೇಬಲ್ ನೆಟ್‌ವರ್ಕ್‌ನ ಮಾಲಕ ಪ್ರವೀಣ್ ಬೊಳುವಾರುರವರನ್ನು ಕೆ.ಎಸ್.ಟಿ.ಎ ವತಿಯಿಂದ ಗೌರವಿಸಲಾಯಿತು.


ಟೈಲರ್ ಅಸೋಸಿಯೇಶನ್ ಕ್ಷೇತ್ರ ಸಮಿತಿಯ ಅಧ್ಯಕ್ಷೆ ಉಮಾ ಯು ನಾಕ್, ನಿಕಟಪೂರ್ವ ಅಧ್ಯಕ್ಷ ಜಯರಾಮ ಬಿ.ಎನ್, ರಾಜ್ಯ ಸಮಿತಿ ಆಂತರಿಕ ಲೆಕ್ಕ ಪರಿಶೋಧಕ ರಘುನಾಥ ಬಿ, ಜಿಲ್ಲಾಧ್ಯಕ್ಷ ಜಯಂತ ಉರ್ಲಾಂಡಿ, ಕೋಶಾಧಿಕಾರಿ ಪರಮೇಶ್ವರ ಕಾಣಿಯೂರು, ಪ್ರಧಾನ ಕಾರ್ಯದರ್ಶಿ ಬಿ.ಸಿ ಚಿತ್ರ, ನಗರ ವಲಯ ಅಧ್ಯಕ್ಷ ದಿನೇಶ್ ಸಂಪ್ಯ, ನಗರ ವಲಯ ಆಶಾ ಕಲ್ಲಾರೆ, ಯಶೋಧರ ಜೈನ್ ದರ್ಬೆ, ರಮೇಶ್ ಕೆಮ್ಮಾಯಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here