ಹಿರೇಬಂಡಾಡಿಯಲ್ಲಿ ಆಟಿದ ಕೂಟ ಕಾರ್ಯಕ್ರಮ

0

ಉಪ್ಪಿನಂಗಡಿ: ಆತ್ಮಗುರು ಕೃಷಿ ಸ್ವ ಸಹಾಯ ಸಂಘದ ವತಿಯಿಂದ ಹಿರೇಬಂಡಾಡಿ ಗ್ರಾಮದ ನಿಡ್ಡೆಂಕಿಯ ಚಂದ್ರಾವತಿ ಅವರ ಮನೆಯಲ್ಲಿ ಆಟಿದ ಕೂಟ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ವಿವಿಧ ಆಟೋಟ ಸ್ಪರ್ಧೆಗಳು, ಆಟಿಯ ನೆನಪು ಮತ್ತಿತರರು ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷ ಹರೀಶ್ಚಂದ್ರ ನಿಡ್ಡೆಂಕಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಸಾಯಿನಾಥ್ ಮತ್ತು ಅಶ್ವಿನಿ ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಭಾರತಿ ಸ್ವಾಗತಿಸಿ, ವಂದಿಸಿದರು. ಹಿರೇಬಂಡಾಡಿ ಗ್ರಾ.ಪಂ. ಸದಸ್ಯ ಸತೀಶ್ ಶೆಟ್ಟಿ ಹೆನ್ನಾಳ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here