ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳು ಸವಣೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ಪ್ರಮಥ ಎಮ್ ಭಟ್ , ಮೊಹಮ್ಮದ್ ರಿಹಾನ್ (10ನೇ), ವಿಶಾಲ್ 10ನೇ ತರಗತಿ  ಹಾಗೂ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ 6ನೇ ತರಗತಿಯ ಅಭಿಜ್ಞಾ ಶಾಂಭವಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ 9ನೇ ತರಗತಿಯ ನೂತನ್ ಹಾಗೂ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ 6ನೇ ತರಗತಿಯ ಮಹತಿ, 7ನೇ ತರಗತಿಯ ತನ್ವಿ.ಎನ್.ಎಂ ಹಾಗೂ 7ನೇ ತರಗತಿಯ ವರ್ಷಿ.ರೈ ದ್ವಿತೀಯ ಬಹುಮಾನ ಪಡೆದಿರುತ್ತಾರೆ ಎಂದು ಶಾಲಾ ಮುಖ್ಯಗುರುಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here