ನರೇಂದ್ರ ಪ.ಪೂ.ಕಾಲೇಜಿನಲ್ಲಿ ನೂತನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘಗಳ ಉದ್ಘಾಟನಾ ಕಾರ್‍ಯಕ್ರಮ

0

ಪುತ್ತೂರು: ಪ್ರಜಾಪ್ರಭುತ್ವದ ಅರಿವು ವಿದ್ಯಾರ್ಥಿಗಳಿಗೆ ಆಗಬೇಕಾದರೆ ವಿದ್ಯಾರ್ಥಿ ಸಂಘಗಳು ಸಕ್ರಿಯವಾಗಬೇಕು.ವಿದ್ಯಾರ್ಥಿ ಶಕ್ತಿ ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನ ನಡೆಯಬೇಕು.ಕಲಿಕೆಯ ಜೊತೆಗೆ ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ ಸಮಾಜದ ಸದ್ಬಳಕೆಯಾಗುವುದು.ಎಂದು ಬೆಂಗಳೂರಿನ ಹೈಕೋರ್ಟ್ ನ ನ್ಯಾಯವಾದಿಗಳಾದ ಸುಯೋಗ್ ಹೇರಳೆ. ಇ. ಹೇಳಿದರು.


ನರೇಂದ್ರ ಪ.ಪೂ.ಕಾಲೇಜಿನಲ್ಲಿ 2023-24 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾಯಕತ್ವದ ಬೆಳವಣಿಗೆಗೆ ಹಾಗೂ ಆರೋಗ್ಯಯುತ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ವಿದ್ಯಾರ್ಥಿಸಂಘಗಳು ಮಾರ್ಗಸೂಚಿಗಳಾಗಲಿವೆ.ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸಬಲ್ಲ ಶಕ್ತಿ ಇರುವ ವಿದ್ಯಾರ್ಥಿ ಜೀವನದಲ್ಲಿ, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಲ್ಲಿ ಉತ್ತಮ ಪ್ರಜೆಗಳಾಗಿ ಬದುಕಲು ಸಾಧ್ಯ.ಜಗತ್ತಿನ ಕತ್ತಲೆಯನ್ನು ಹೋಗಲಾಡಿಸುವ ಅಗಾಧ ಶಕ್ತಿ ವಿದ್ಯಾರ್ಥಿಗಳಲ್ಲಿದೆ.ಉತ್ತಮ ನಾಯಕತ್ವ ಗುಣಮಟ್ಟವನ್ನು ಬೆಳೆಸಿಕೊಂಡಾಗ ಪ್ರಪಂಚವನ್ನೇ ಬದಲಿಸುವಂತಹ ಪ್ರಜೆಗಳಾಗಬಹುದು. ಎಂದು ಹೇಳಿದರು.


ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನರೇಂದ್ರ ಪ.ಪೂ.ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸಂಪತ್ ಕುಮಾರ್ ಮಾತನಾಡಿ ಜೀವನದಲ್ಲಿ ವಿದ್ಯಾರ್ಥಿಗಳು ಕಲಿಕೆಯ ಗುಣಮಟ್ಟವನ್ನು ವೃದ್ಧಿಸಿ ಏಕತೆಯಿಂದ ಒಗ್ಗೂಡಿಕೊಂಡು ನಿರಂತರ ಪರಿಶ್ರಮದಿಂದ ಸಾಧಿಸಬೇಕಾದ ಅನಿವಾರ್‍ಯತೆಯಿದೆ.ಸಮಾಜಕ್ಕೆ ಸಹಕಾರಿಯಾಗುವಂತಹ ಶಿಕ್ಷಣವು ವಿದ್ಯಾರ್ಥಿಗಳಿಗೆ ಸಿಗಬೇಕಿದೆ.ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘವು ಹೆಜ್ಜೆ ಹಾಕಬೇಕು . ಎಂದು ಹೇಳಿದರು.


ವೇದಿಕೆಯಲ್ಲಿ ಕಾರ್‍ಯಕ್ರಮದ ಮುಖ್ಯ ಅತಿಥಿಯಾದ ದರ್ಬೆಯ ಸಚಿನ್ ಟ್ರೇಡರ್ಸ್ ನ ಮಾಲಕರಾದ ಸಚಿನ್ ನಾಯಕ್ ಎಸ್.,ನರೇಂದ್ರ ಪ.ಪೂ.ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ,ಸಂಚಾಲಕರಾದ ಸಂತೋಷ ಬಿ. ಉಪಸ್ಥಿತರಿದ್ದರು.


ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಬೋಧಿಸಿದರು.
ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ನಾಯಕನಾದ ದ್ವಿತೀಯ ವಿಜ್ಞಾನ ವಿಭಾಗದ ಹರ್ಷೇಂದ್ರ ಪ್ರಸಾದ್,ಕಾರ್‍ಯದರ್ಶಿಯಾದ ನೇತ್ರಾ ಭಟ್,ಜೊತೆ ಕಾರ್‍ಯದರ್ಶಿಯಾದ ಪ್ರಥಮವಿಜ್ಞಾನ ವಿಭಾಗದಅಗಮ್ಯ,ಕ್ರೀಡಾ ಸಂಘದ ನಾಯಕನಾದ ದ್ವಿತೀಯ ವಿಜ್ಞಾನ ವಿಭಾಗದ ಸೃಜನ್‌ ಉಪಸ್ಥಿತರಿದ್ದರು.


ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳು ಕಾಲೇಜಿನ ನಿಯಮಗಳಿಗೆ ಶಾಸನಗಳಿಗೆ ಬದ್ಧರಾಗಿ ಪಾಲನೆಮಾಡುತ್ತೇವೆ ಮತ್ತು ಕಾಲೇಜಿನ ಅಭಿವೃದ್ಧಿಗಾಗಿ ಪ್ರಗತಿಗಾಗಿ ಶ್ರಮಿಸುತ್ತೇವೆ ಎಂದು ಪ್ರತಿಜ್ಞೆಯನ್ನು ಮಾಡಿದರು.


ಕಾರ್‍ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್‌ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ದ್ವಿತೀಯ ವಿಜ್ಞಾನ ವಿಭಾಗದ ಕು.ಚಸ್ಮಿತಾ ವಂದಿಸಿದರು.ದ್ವಿತೀಯ ವಾಣಿಜ್ಯ ವಿಭಾಗದ ಭೂಮಿಕಾ ಕಾರ್‍ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here