ಆನೆಮಜಲು ಕಳವು ಪ್ರಕರಣ -ಓರ್ವ ಆರೋಪಿ ಬಂಧನ

0

ಪುತ್ತೂರು: ಬನ್ನೂರು ಗ್ರಾಮದ ಆನೆಮಜಲಿನಲ್ಲಿ ನಡೆದಿದ್ದ 6.9 ಲಕ್ಷ ರೂ.ಮೌಲ್ಯದ 152 ಗ್ರಾಂ ಚಿನ್ನಾಭರಣ, 50 ಸಾವಿರ ರೂ.ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಜು.27ರಂದು ಆರೋಪಿಯೊಬ್ಬನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.7 ದಿನಗಳ ಬಳಿಕ ಆ.4ರಂದು ರಾತ್ರಿ ಪೊಲೀಸರು ಈ ಮಾಹಿತಿ ಹಂಚಿಕೊಂಡಿದ್ದಾರೆ.ಆರೋಪಿ ತಮಿಳುನಾಡು ಸೇಲಂ ನಿವಾಸಿ ಸಂತೋಷ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here