ಆ.6: ಕುಂಬ್ರದಲ್ಲಿ ವರ್ತಕ ಸ್ನೇಹ ಸಂಜೆ ಸಾಧಕರಿಗೆ ಸನ್ಮಾನ-ವಿಠಲ ನಾಯಕ್ ಕಲ್ಲಡ್ಕ ಬಳಗದಿಂದ ಗೀತಾ ಸಾಹಿತ್ಯ ಸಂಭ್ರಮ

0

ಪುತ್ತೂರು: ಕುಂಬ್ರ ವರ್ತಕರ ಸಂಘ ಅರ್ಪಿಸುವ ವರ್ತಕ ಸ್ನೇಹ ಸಂಜೆ, ಸಾಧಕರಿಗೆ ಸನ್ಮಾನ ಹಾಗೂ ವಿಠಲ ನಾಯಕ್ ಕಲ್ಲಡ್ಕ ಬಳಗದವರ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಆ.6 ರಂದು ಸಂಜೆ ಕುಂಬ್ರ ನವೋದರ ರೈತ ಸಭಾ ಭವನದಲ್ಲಿ ನಡೆಯಲಿದೆ.

ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಕುಂಬ್ರದ ಉದ್ಯಮಿ, ಕೊಡುಗೈ ದಾನಿ ಮೋಹನದಾಸ ರೈ ಕುಂಬ್ರರವರು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಉದ್ಯಮಿ ಬೂಡಿಯಾರ್ ರಾಧಾಕೃಷ್ಣ ರೈ, ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಧ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಉದ್ಯಮಿ ಪದ್ಮಶ್ರೀ ಸೋಲಾರ್‌ನ ಸೀತಾರಾಮ ರೈ ಕೆದಂಬಾಡಿಗುತ್ತು, ಉದ್ಯಮಿ ಯೂಸುಫ್ ಹಾಜಿ ಕೈಕಾರ, ವರ್ತಕ ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮಸುಂದರ ರೈ ಕೊಪ್ಪಳ, ಸಂಘದ ಗೌರವ ಸಲಹೆಗಾರರಾದ ಪಿ.ಎಂ ಅಬ್ದುಲ್ ರಹೀಮಾನ್ ಹಾಜಿ ಅರಿಯಡ್ಕ, ಕುಂಬ್ರ ದುರ್ಗಾಪ್ರಸಾದ್ ರೈ, ಚಂದ್ರಕಾಂತ ಶಾಂತಿವನ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸನ್ಮಾನ ಕಾರ್ಯಕ್ರಮದಲ್ಲಿ ನಿವೃತ್ತ ಕೌಂಪೌಂಡರ್ ನರಸಿಂಹ ಭಟ್ ಪುತ್ತೂರು, ಕುಶಲಕರ್ಮಿ ಸುಂದರಿ ಆಚಾರಿ, ಪವರ್‌ಮೆನ್ ಚಂದ್ರಶೇಖರ ಬಿ.ಜೆ, ನಂದಿನಿ ಹಾಲು ಮಾರಾಟದಲ್ಲಿ ಪ್ರಥಮ ಸ್ಥಾನ ಪಡೆದ ಮೆಲ್ವಿನ್ ಮೊಂತೆರೋ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಅನುಷ್ ರೈರವರುಗಳಿಗೆ ಸನ್ಮಾನ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ರಾಜ್ಯದಾದ್ಯಂತ ಜನಮನ ಸೂರೆಗೊಂಡಿರುವ ವಿನೂತನ ಶೈಲಿಯ ಗೀತಾ ಸಾಹಿತ್ಯ ಸಂಭ್ರಮವನ್ನು ವಿಠಲ ನಾಯಕ್ ಕಲ್ಲಡ್ಕ ಮತ್ತು ಬಳಗದವರು ನಡೆಸಿಕೊಡಲಿದ್ದಾರೆ. ಕಲಾಭಿಮಾನಿಗಳು, ವರ್ತಕ ಬಂಧುಗಳು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯ, ಪ್ರಧಾನ ಕಾರ್ಯದರ್ಶಿ ಭವ್ಯ ರೈ, ನಿಕಟಪೂರ್ವ ಅಧ್ಯಕ್ಷ ಮಾಧವ ರೈ ಕುಂಬ್ರ, ಕೋಶಾಧಿಕಾರಿ ಸಂಶುದ್ದೀನ್ ಎ.ಆರ್ ಸಹಿತ ಪದಾಧಿಕಾರಿಗಳು, ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here