ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಜ್ವಲ ನಾಳೆಗಾಗಿ ಸಶಕ್ತೀಕರಣ ಕುರಿತು ಸಂಪನ್ಮೂಲ ಗೋಷ್ಠಿ

0

ವಿಟ್ಲ: ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಜ್ವಲ ನಾಳೆಗಾಗಿ ಸಬಲೀಕರಣ ಕುರಿತು ಸಂಪನ್ಮೂಲ ಗೋಷ್ಠಿ ನಡೆಯಿತು.


ಪುತ್ತೂರು ಜೂನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ. ವಿ. ಸೂರ್ಯನಾರಾಯಣ ಭಟ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿ ನೀಡಿ ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯ ಫಲಿತಾಂಶವೆಂದರೆ ಅದು ಯಶಸ್ಸು ಎಂದ ಅವರು ತಮ್ಮ ಸ್ಪೂರ್ತಿದಾಯಕ ಉಲ್ಲೇಖಗಳ ಮೂಲಕ ಮಕ್ಕಳನ್ನು ಪ್ರೇರೇಪಿಸಿದರು.


ವಿದ್ಯಾರ್ಥಿಗಳಾದ ಮುಹಮ್ಮದ್ ಅಜ್ಮಲ್ ಮತ್ತು ಪ್ರೇಕ್ಷಾ ಅವರು ಅಧಿವೇಶನದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ಆಡಳಿತಾಧಿಕಾರಿ ರವೀಂದ್ರ ಡಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮೀ ವಿ. ಶೆಟ್ಟಿ ಉಪಸ್ಥಿತರಿದ್ದರು. ಸಹಾಯಕ ಶಿಕ್ಷಕಿ ರಶ್ಮಿ ಕೆ. ಫೆರ್ನಾಂಡಿಸ್ ಸ್ವಾಗತಿಸಿ, ಶಾಲಾ ವಿದ್ಯಾರ್ಥಿನಿ ಪ್ರಕೃತಿ ಪಿ. ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here