ನಿವೃತ್ತ ಸಿ.ಆರ್.ಪಿ.ಎಫ್ ಯೋಧ ಬಾಲಕೃಷ್ಣ ಪಟ್ಟೆಯವರಿಗೆ ಬಿಜೆಪಿಯಿಂದ ಗೌರವ

0

ಪುತ್ತೂರು: ಸುಧೀರ್ಘ 20 ವರ್ಷಗಳ ಕಾಲ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಸ್ವಗೃಹಕ್ಕೆ ಆಗಮಿಸಿದ ಸಿ.ಆರ್.ಪಿ.ಎಫ್ ನಿವೃತ್ತ ಯೋಧ ಬಾಲಕೃಷ್ಣ ಪಟ್ಟೆ ಅವರನ್ನು ಬಿಜೆಪಿ ಗ್ರಾಮಾಂತರ ಮಂಡಲದಿಂದ ಅವರ ಮನೆಗೆ ತೆರಳಿ ಗೌರವಿಸಲಾಯಿತು.


ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠoದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ನೀತಿಶ್ ಕುಮಾರ್ ಶಾಂತಿವನ ಹಾಗೂ ಪುರುಷೋತ್ತಮ ಮುಂಗ್ಲಿಮನೆ, ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಅರುಣ್ ವಿಟ್ಲ, ಜಿಲ್ಲಾ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಹರೀಶ್ ಬಿಜತ್ರೆ, ಆರ್ಯಾಪು ಶಕ್ತಿ ಕೇಂದ್ರ ಪ್ರಮುಖರಾದ ಜಯಂತ ಶೆಟ್ಟಿ, ಫಲಾನುಭವಿಗಳ ಪ್ರಕೋಷ್ಟದ ಸಹ ಸಂಚಾಲಕ ಸುಧಾಕರ ಆಳ್ವ ಕಲ್ಲಡ್ಕ , ವಿಶ್ವನಾಥ ಕುಲಾಲ್, ಆರ್ಯಾಪು ಪಂಚಾಯತ್ ಸದಸ್ಯರಾದ ಚೇತನ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ರು. ಬಾಲಕೃಷ್ಣ ಪಟ್ಟೆ ರವರ ಇಬ್ಬರು ಸಹೋದರರು ಕೂಡ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿತ್ತಿದ್ದಾರೆ ಎಂಬುದು ದೇಶಕ್ಕೆ ಹೆಮ್ಮೆ ಎಂದು ಬಿಜೆಪಿ ಮಂಡಲದ ಪದಾಧಿಕಾರಿಗಳು ತಿಳಿಸಿದರು.

LEAVE A REPLY

Please enter your comment!
Please enter your name here