ಆ.8: ಒಡಿಯೂರು ಸಂಸ್ಥಾನದಲ್ಲಿ ಶ್ರೀಗಳವರ ಜನ್ಮದಿನೋತ್ಸವ – ಗ್ರಾಮೋತ್ಸವ – 2023

0

ಸೇವಾ ಸಂಭ್ರಮ – ಗುರುವಂದನ

ವಿಟ್ಲ: ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿ ವತಿಯಿಂದ ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಗ್ರಾಮೋತ್ಸವ 2023 ಸೇವಾ ಸಂಭ್ರಮ – ಗುರುವಂದನ ಕಾರ್ಯಕ್ರಮ ಆ.8ರಂದು ನಡೆಯಲಿದೆ.

ಬೆಳಗ್ಗೆ 8ಕ್ಕೆ ಶ್ರೀ ಗಣಪತಿ ಹವನ, ಶ್ರೀ ಅರವಿಂದ ಆಚಾರ್ಯ ಮಾಣಿಲ ಮತ್ತು‌ ಬಳಗದವರಿಂದ ದಾಸವಾಣಿ, 9.30ರಿಂದ ಶ್ರೀಗಳ ಪಾದಪೂಜೆ, ತುಲಾಭಾರ, ಉಯ್ಯಾಲೆ ಸೇವೆ, ಗುರುವಂದನೆ ನಡೆಯಲಿದೆ.


ಬಳಿಕ ನಡೆಯುವ ಸಭಾಕಾರ್ಯಕ್ರಮದಲ್ಲಿ ಶ್ರೀಗುರುದೇವಾನಂದ ಸ್ವಾಮೀಜಿಯವರು ಅನುಗ್ರಹ ಸಂದೇಶ ನೀಡಲಿದ್ದು, ಸಾಧ್ವಿ ಮಾತಾನಂದಮಯೀ ದಿವ್ಯ ಉಪಸ್ಥಿತಿ ಕರುಣಿಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮುಂಬಯಿ ಹೈಟೆಕ್ ಇಲೆಕ್ಟ್ರಿಫಿಕೇಶನ್ ಇಂಜಿನಿಯರಿಂಗ್ ಆಡಳಿತನಿರ್ದೇಶಕ ರವಿನಾಥ್ ವಿ. ಶೆಟ್ಟಿ ಅಂಕ್ಲೇಶ್ವರ ಭಾಗವಹಿಸಲಿದ್ದಾರೆ. ಮುಂಬಯಿ ಹೇರಂಬ ಕೆಮಿಕಲ್ ಇಂಡಸ್ಟೀಸ್ ಅಧ್ಯಕ್ಷ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ, ಮೂಡಬಿದರೆ ಆಳ್ವಾಸ್‌ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಸಂಗೀತ ನಿರ್ದೇಶಕ ಶಂಕರ ಶ್ಯಾನುಬೋಗ್, ಬರೋಡ ಶಶಿಕ್ಯಾಟರಿಂಗ್ ಸರ್ವಿಸಸ್ ಆಡಳಿತ ನಿರ್ದೇಶಕ ಶಶಿಧರ ಬಿ. ಶೆಟ್ಟಿ ಬರೋಡ ರವರಿಗೆ ವಿಶೇಷ ಗೌರ ಪುರಸ್ಕಾರ ನಡೆಯಲಿದೆ. ಸಾಂಸಕೃತಿಕ ಕಾರ್ಯಕ್ರಮದ ಅಂಗವಾಗಿ ಸಾಯಂಕಾಲ 6 ಗಂಟೆಯಿಂದ ತುಳುವೆರೆ ತುಡರ್ ಕಲಾತಂಡ ಸುರತ್ಕಲ್ ಇವರಿಂದ ಕೊಪ್ಪರಿಗೆ ನಾಟಕ ‌ನಡೆಯಲಿದೆ. ರಾತ್ರಿ 7ರಿಂದ ಶ್ರೀ ಸನ್ನಿಧಿಯಲ್ಲಿ ವಿಶೇಷ ರಂಗಪೂಜೆ, ಬೆಳ್ಳಿ ರಥೋತ್ಸವ,ಮಹಾ ಪೂಜೆ ನಡೆಯಲಿದೆ ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ‌.

LEAVE A REPLY

Please enter your comment!
Please enter your name here