ಷಣ್ಮುಖದೇವ ಪ್ರೌಢಶಾಲೆಯಲ್ಲಿ ಶಿಕ್ಷಕರ ತರಬೇತಿ ಕಾರ್ಯಾಗಾರ

0

ಪುತ್ತೂರು: ಷಣ್ಮುಖದೇವ ಪ್ರೌಢಶಾಲೆಯಲ್ಲಿ ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಷಣ್ಮುಖ ದೇವ ವರ್ತುಲದ ಶಿಕ್ಷಕರ ತರಬೇತಿ ಕಾರ್ಯಾಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ಪೂರ್ಣಾತ್ಮರಾಮ, ಟಿ ನಾರಾಯಣ ಭಟ್ ರಾಮಕುಂಜ, ಸತೀಶ್ ಕುಮಾರ್ ಬಿ ಆರ್ ಪ್ರಶಿಕ್ಷಣಾರ್ಥಿಗಳಿಗೆ ದೇಶಭಕ್ತಿ, ಶಿಕ್ಷಕನ ಬೆಲೆ ನೆಲೆ, ಬುನಾದಿ ಇಂಗ್ಲಿಷ್ ಮೊದಲಾದ ಅನೇಕ ವಿಷಯಗಳ ಕುರಿತು ಮಾಹಿತಿ ತಿಳಿಸಿದರು. ಚಂದ್ರ ಶೇಖರ್ ಮಾತನಾಡಿ ಬದಲಾವಣೆಗೆ ಹೊಂದಿಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ವರ್ತುಲದ ನಾಲ್ಕು ಶಾಲೆಗಳ ಸುಮಾರು ಅರವತ್ತು ಶಿಕ್ಷಕರು ಭಾಗವಹಿಸಿದ್ದರು.ಶಾಲಾ ಸಂಚಾಲಕ ಶಿವರಾಮ ಭಟ್ ಬೀರ್ಣಕಜೆ, ಅಧ್ಯಕ್ಷ ತೀರ್ಥಾನಂದ ದುಗ್ಗಳ ಶಿಕ್ಷಣಾರ್ಥಿಗಳಿಗೆ ಶುಭ ಹಾರೈಸಿದರು ಮುಖ್ಯ ಗುರು ಕೃಷ್ಣ ವೇಣಿ ಸ್ವಾಗತಿಸಿ, ಶಿಕ್ಷಕ ನಂಜುಂಡಪ್ಪ ವಂದಿಸಿದರು.

LEAVE A REPLY

Please enter your comment!
Please enter your name here