ಆ. 14: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ 2023- ಸವಣೂರು ಸೀತಾರಾಮ ರೈ

0

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸ್ಥಾಪಕ ಶೀಂಟೂರು ನಾರಾಯಣ ರೈಯವರ 12ನೇ ವರ್ಷದ ಸ್ಥಾಪಕರ ದಿನಾಚರಣೆ ಸವಣೂರು ವಿದ್ಯಾಗಂಗೋತ್ರಿಯ ವಿದ್ಯಾಚೇತನ ಸಭಾಂಗಣದಲ್ಲಿ ಆ. 14 ರಂದು ಬೆಳಿಗ್ಗೆ 10.00 ಗಂಟೆಯಿಂದ ನಡೆಯಲಿದೆ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈಯವರು ತಿಳಿಸಿದರು.


ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದಾರೆ. ಇಂಡಿಯನ್ ನೇವಿ ಚೀಫ್ ಇಲೆಕ್ಟ್ರಿಕಲ್ ಆರ್ಟಿಫಿಶರ್ ರೆಡಿಯೋ ಚಿಯರ್ (ನಿವೃತ್ತ) ವಿಕ್ರಂ ದತ್ತ ಶೀಂಟೂರು ಸನ್ಮಾನ ಪಡೆಯಲಿದ್ದಾರೆ. ಮುಂಬಯಿಯ ಹೇರಂಭ ಇಂಡಸ್ಟ್ರೀಸ್ ಅಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿರವರು ಸನ್ಮಾನಿಸಲಿದ್ದಾರೆ. ಮಂಗಳೂರು ಕಾಲೇಜ್ ಆಫ್ ಫಿಷರೀಸ್ ನ ನಿವೃತ್ತ ಡೈರೆಕ್ಟರ್ ಆಫ್ ಇನ್ಸ್ಟಕ್ಷನ್ ಪ್ರೊ. ಡಾ. ಡಿ.ಎಸ್. ಶೇಷಪ್ಪ ಶೀಂಟೂರು ಸಂಸ್ಮರಣೆ ಮಾಡಲಿದ್ದಾರೆ.


ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಗುಜರಾತ್ ಗ್ರೀನ್ ಹೀರೋ ಆಫ್ ಇಂಡಿಯಾದ ಸಹ ಸಂಸ್ಥಾಪಕ ಡಾ. ಆರ್. ಕೆ. ನಾಯರ್, ಫಾರೆಸ್ಟ್ ಕ್ರಿಯೇಟರ್. ದುಬೈ ಕ್ವರಿಯತ್ ಅಲ್ ಶಮ್ಸ್ ಬಿಲ್ಡಿಂಗ್ ಕನ್ಸ್ಟ್ರಕ್ಟಿಂಗ್ ಎಲ್.ಎಲ್.ಸಿ. ಮೇನೇಜಿಂಗ್ ಡೈರೆಕ್ಟರ್ ಅಶ್ರಫ್ ಶಾ ಮಾಂತೂರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಸ್.ಎನ್.ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್‌ನ ವಿಶ್ವಸ್ಥರಾದ ಎನ್. ಸುಂದರ ರೈ ಸವಣೂರು ಮತ್ತು ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಗೌರವ ಉಪಸ್ಥಿತರಾಗಿ ಭಾಗವಹಿಸಲಿದ್ದಾರೆ

ಶಾಸಕ ಆಶೋಕ್ ಕುಮಾರ್ ರೈಯವರಿಗೆ ಗೌರವಾರ್ಪಣೆ
ಪುತ್ತೂರು ಶಾಸಕರಾದ ಬಳಿಕ ಪ್ರಥಮ ಬಾರಿಗೆ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿರುವ ಶಾಸಕ ಆಶೋಕ್ ಕುಮಾರ್ ರೈಯವರನ್ನು ಸಂಸ್ಥೆಯ ವತಿಯಿಂದ ಗೌರವಾರ್ಪಣೆ ಮಾಡಲಿದ್ದೇವೆ.

10 ವಿದ್ಯಾರ್ಥಿ-ವಿದ್ಯಾರ್ಥಿನಿರಿಗೆ ಶೀಂಟೂರು ಶಿಷ್ಯ ವೇತನ
ವಿದ್ಯಾರಶ್ಮಿ ವಿದ್ಯಾಲಯದ ದಶಮಾನೋತ್ಸವ ಆಚರಣೆಯು ಸಂದರ್ಭದಲ್ಲಿ ಮಂಗಳೂರಿನ ಉದ್ಯಮಿ ಡಾ.ಎ.ಜೆ.ಶೆಟ್ಟಿರವರು ಪ್ರಸ್ತಾಪಿಸಿ ಮುಂದಿಟ್ಟ ಯೋಜನೆಯೇ ಶೀಂಟೂರು ನಾರಾಯಣ ರೈ ಶಿಕ್ಷಣ ಪ್ರತಿಷ್ಠಾನ ಸವಣೂರು ಆಗಿದ್ದು, ಡಾ.ಎ.ಜೆ.ಶೆಟ್ಟಿರವರು ಮೊತ್ತ ಮೊದಲಾಗಿ ತಮ್ಮ ಕೈಯಾರೆ 10 ಲಕ್ಷ ರೂಪಾಯಿಯನ್ನು ನೀಡಿದ್ದರು. ಇದರಿಂದ ಬರುವ ಬಡ್ಡಿ ಹಣವನ್ನು ಪ್ರತಿಭಾವಂತ ಮತ್ತು ಆರ್ಥಿಕ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶಿಷ್ಯ ವೇತವನ್ನು ನೀಡಬೇಕೆಂದು ನಿರ್ದೇಶಿಸಿದರು. ಇದರಿಂದ ಪ್ರೇರಿತರಾಗಿ ಮುಂದೆ ಹಲವು ಮಂದಿ ಸಹೃದಯಿ ದಾನಿಗಳು ಸ್ವಯಂ ಇಚ್ಚೆಯಿಂದ ಉತ್ತಮ ಮೊತ್ತವನ್ನು ನೀಡುತ್ತಾ ಬಂದಿದ್ದಾರೆ. ಆದರಂತೆ ಪ್ರತಿ ವರ್ಷ ಶೀಂಟೂರು ಸ್ಮೃತಿ ಕಾರ್‍ಯಕ್ರಮದಲ್ಲಿ ವಿವಿಧ ತರಗತಿಗಳ ಹತ್ತು ಮಂದಿ ಆರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಗುರುತಿಸಿ, ತಲಾ 5 ಸಾವಿರದಂತೆ ಶಿಷ್ಯ ವೇತನವನ್ನು ನೀಡುತ್ತಿದ್ದೇವೆ ಎಂದು ಸವಣೂರು ಕೆ. ಸೀತಾರಾಮ ರೈ ತಿಳಿಸಿದರು.


ವಿದ್ಯಾರಶ್ಮಿ ಸಂಸ್ಥೆಯ ಟ್ರಸ್ಟಿ ಎನ್.ಸುಂದರ ರೈ ಸವಣೂರು, ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಸವಣೂರು, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲ ಶೇಷಗಿರಿರವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

2ನೇ ಮಹಾಯುದ್ಧದಲ್ಲಿ ಭಾರತೀಯ ಸೇನಾನಿಯಾಗಿ ಬರ್ಮಾದಲ್ಲಿ ಕರ್ತವ್ಯ ನಿರ್ವಹಿಸಿದ್ದ, ಶೀಂಟೂರು ನಾರಾಯಣ ರೈಯವರು ಸೇನಾ ನಿವೃತ್ತಿಯ ಬಳಿಕ ಶಿಕ್ಷಕರಾಗಿದ್ದರು ಮತ್ತು ಸಹಕಾರಿ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ಒತ್ತಾಸೆಯಂತೆ ಸವಣೂರಿನಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಆರಂಭಮಾಡಲಾಗಿದೆ. ಶೀಂಟೂರು ನಾರಾಯಣ ರೈಯವರ ಜೀವನಾದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಪ್ರತಿ ವರ್ಷ ಅವರ ನೆನಪಿನಲ್ಲಿ ಆಚರಿಸಿಕೊಂಡು ಬರುತ್ತಿರುವ ಶೀಂಟೂರು ಸ್ಮೃತಿ ಕಾರ್ಯಕ್ರಮದಲ್ಲಿ ಒಂದು ವರ್ಷ ಒಬ್ಬ ಶಿಕ್ಷಕ ಮತ್ತು ಇನ್ನೊಂದು ವರ್ಷದಲ್ಲಿ ಒಬ್ಬ ಸೇನಾನಿಯನ್ನು ಗುರುತಿಸಿ ಅವರನ್ನು ಸನ್ಮಾನಿಸುತ್ತಾ ಬಂದಿದ್ದೇವೆ.
-ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ
ಸಂಚಾಲಕರು. ವಿದ್ಯಾರಶ್ಮಿ ಸಮೂಹ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು

LEAVE A REPLY

Please enter your comment!
Please enter your name here