ಹಿರೇಬಂಡಾಡಿ: ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ

0

ಹಿರೇಬಂಡಾಡಿ: ವರಮಹಾಲಕ್ಷ್ಮಿ ಪೂಜಾ ಸಮಿತಿ ಶಿವನಗರ ಹಿರೇಬಂಡಾಡಿ ಇದರ ಆಶ್ರಯದಲ್ಲಿ ನಡೆಯುವ 6ನೇ ವರ್ಷದ ವರಮಹಾಲಕ್ಷ್ಮೀ ವೃತ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಯು ಶಿವನಗರ ಮಂಜುಶ್ರೀ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.


ಪೂಜಾ ಸಮಿತಿ ಅಧ್ಯಕ್ಷೆ ಯಮುನಾ ಮುರದಮೇಲು, ಕಾರ್ಯದರ್ಶಿ ನೀತಾ ಕೇಪುಳು, ಖಜಾಂಜಿ ಸುಮಿತ್ರ ಹಲಸಿನಕಟ್ಟೆ, ಹಿರೇಬಂಡಾಡಿ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ ನೆಹರುತೋಟ, ಉಳತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ ತೋಳ್ಪಾಡಿತ್ತಾಯ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here